Thursday, October 3, 2024
Thursday, October 3, 2024

ಸಿಎಂ ಆಗುವ ಗುರಿಗೆ ಬದಲು ನಮ್ಮದು ಭ್ರಷ್ಟಾಚಾರದ ವಿರುದ್ಧ ಬಂಡಾಯ- ಶಿಂಧೆ

Date:

ನಾನು ಮುಖ್ಯಮಂತ್ರಿಯಾಗಲು ಬಂಡಾಯವೆದ್ದಿರಲಿಲ್ಲ.

ಶಿವಸೇನೆ, ಕಾಂಗ್ರೆಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರ ಸಹಿಸಲಾಗದೇ ನಾವೆಲ್ಲರೂ ಹೊರಬಂದಿದ್ದೇವೆ ಎಂದು ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಸಮರ್ಥಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಮುಂದಿನ ಸಿಎಂ ಏಕನಾಥ್​ ಶಿಂಧೆ ಎಂದು ಮಾಜಿ ಸಿಎಂ ದೇವೆಂದ್ರ ಫಡ್ನವಿಸ್​ ಘೋಷಿಸಿದ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಶಿವಸೇನೆ ಮತ್ತು ಎನ್​ಸಿಪಿ ಸರ್ಕಾರದ ಭ್ರಷ್ಟಾಚಾರದಿಂದ ಸಾಕಾಗಿ ಹೋಗಿದ್ದೆವು ಎಂದು ಹೇಳಿದ್ದಾರೆ.

ಶಿವಸೇನೆ ಮತ್ತು ಎನ್​ಸಿಪಿ ಮೈತ್ರಿ ಬಾಳಾಸಾಹೇಬ್​ ಠಾಕ್ರೆ ಅವರ ತತ್ವ ಸಿದ್ಧಾಂತದ ವಿರುದ್ಧವಾಗಿತ್ತು. ಅದೆಲ್ಲವನ್ನೂ ತೊರೆದು ಮೈತ್ರಿ ಮಾಡಿಕೊಂಡಿದ್ದ ಸರ್ಕಾರದಲ್ಲಿ ಸಚಿವರಿಂದಲೇ ನಡೆಯುತ್ತಿದ್ದ ಭ್ರಷ್ಟಾರದಿಂದ ಬೇಸತ್ತು ನಾವು ಹೊರಬಂದಿದ್ದೇವೆ.1980ರ ದಶಕದಲ್ಲಿ ಶಿವಸೇನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ ಶಿಂಧೆ ಬಾಳಾಠಾಕ್ರೆ ಅವರಿಂದ ಹಿಂದುತ್ವದ ರಾಜಕೀಯ ಕಲಿತು ಮಹಾರಾಷ್ಟ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿರುವ ಏಕನಾಥ್​ ಶಿಂಧೆ ಅವರು ಕಿಂಗ್ ಮೇಕರ್ ಅಲ್ಲ ಕಿಂಗ್​​, ಈ ಎಲ್ಲಾ ಬೆಳವಣಿಗೆಗಳಲ್ಲಿ ನಾನು ಯಾವ ಪಾತ್ರವನ್ನೂ ವಹಿಸಿಲ್ಲ, ಇದೆಲ್ಲಾ ಶ್ರೇಯಸ್ಸು ಶಿಂಧೆ ಅವರಿಗೆ ಸೇರಬೇಕಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ಬಿಟ್ಟುಕೊಡುವ ಮೂಲಕ ಬಾಳಾಠಾಕ್ರೆ ಅವರಿಗೆ ಗೌರವ ನೀಡುತ್ತಿದ್ದೇವೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mahatma Gandhiji ಗಾಂಧಿ ಜಯಂತಿಯನ್ನ ಮನೆಹಬ್ಬದಂತೆ ಆಚರಿಸಿದ ಗಾಂಧಿ ಬಸಪ್ಪ ಕುಟುಂಬದ ಸದಸ್ಯರು

Mahatma Gandhiji ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ...

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...