Friday, February 6, 2026
Friday, February 6, 2026

ಇಲೆಕ್ಟ್ರಿಕ್ ವಾಹನ ಜನಸಾಮಾನ್ಯರು ಖರೀದಿಸುವಂತಿರಬೇಕು-ಬೊಮ್ಮಾಯಿ

Date:

ರಾಜ್ಯದಲ್ಲಿ ಹೈಡ್ರೋಜನ್ ಇಂಧನ ಉತ್ಪಾದಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ನಗರದಲ್ಲಿ ನಿನ್ನೆ ಶುಕ್ರವಾರ ಆಯೋಜಿಸಲಾಗಿದ್ದ ಇ.ವಿ ಅಭಿಯಾನ ಮತ್ತು 152 ಚಾರ್ಜಿಂಗ್ ಸ್ಟೇಷನ್‌ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಹೈಡ್ರೋಜನ್ ಇಂಧನ ತಯಾರಿ
ಸಲು ಈಗಾಗಲೇ 2 ಕಂಪನಿ ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೀಘ್ರ 3 ಘಟಕ ಗಳು ಕರ್ನಾ ಟಕದಲ್ಲಿ ಆರಂಭವಾಗಲಿವೆ. ಹೈಡ್ರೋಜನ್ ಇಂಧನ ನವೀಕರಿ ಸಬಹುದಾದ ಇಂಧನಗಳಲ್ಲೇ ಅತ್ಯು ತ್ತಮವಾಗಿದೆ. ಇದರಿಂದ, ಇಂಧನ ಉಳಿತಾಯವಾಗಲಿದೆ. ಕೇಂದ್ರ ಸರ್ಕಾ ರದ ನೆರವಿನಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಮುದ್ರದ ನೀರಿನಿಂದ ಅಮೋ ನಿಯಾ ತಯಾರಿಸಲು ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸ
ಲಾಗಿದೆ. ಡಿಎಪಿ ಗೊಬ್ಬರ ತಯಾರಿಸಲು ಅಮೋನಿಯಾವನ್ನು ಅತಿ ಹೆಚ್ಚು ಬಳಸಲಾಗುತ್ತಿದೆ. ಅಮೋನಿಯಾ ಉತ್ಪಾದಿಸಲು ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಭಾರತ ಹಾಗೂ ಕೊಲ್ಲಿ ದೇಶಗಳು ಹೊರತುಪಡಿಸಿದರೆ ಬೇರೆಲ್ಲಿಯೂ ಈ ರೀತಿ ತಂತ್ರಜ್ಞಾನ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಿಕ್‌ ವಾಹನ ಖರೀದಿ ದರ ಜನಸಾಮಾನ್ಯರಿಗೆ ನಿಲುಕುವಂತಿರ ಬೇಕು. ಉತ್ಪಾದಕರು ಈ ನಿಟ್ಟಿನಲ್ಲಿ ಚಿಂತಿಸಬೇಕು. ಎಲೆಕ್ಟ್ರಿಕಲ್‌ ವಾಹನಗಳಿಗಾಗಿ ಹೆಚ್ಚಿನ ಚಾರ್ಜಿಂಗ್ ಸ್ಟೇಷನ್‌ಗಳು ಹಾಗೂ ಬ್ಯಾಟರಿಗಳನ್ನು ಬದಲಾಯಿಸುವ ವ್ಯವಸ್ಥೆಯ ಕೇಂದ್ರ ಸ್ಥಾಪಿಸಲು ಮಹತ್ವ ನೀಡುವುದು ಅಗತ್ಯವಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಎಲೆಕ್ಟ್ರಿಕಲ್‌ ವಾಹನ ಬಳಕೆ ಮಾಡುತ್ತಿದೆ. ಮುಂಬರುವ ದಿನಗಳಲ್ಲಿ ಮಲ್ಟಿ ಎಕ್ಸಲ್‌ ಎಲೆಕ್ಟ್ರಿಕಲ್‌ ಟ್ರಕ್‌ ಸಹ ಮಾರುಕಟ್ಟೆಗೆ ಬಿಡುಗಡೆಯಾಗಲಿವೆ. ಆಗ ಸಾರಿಗೆ ಕ್ಷೇತ್ರದಲ್ಲಿ ಬದಲಾವಣೆಗಳಾಗಬಹುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...