Wednesday, December 17, 2025
Wednesday, December 17, 2025

ಇಲೆಕ್ಟ್ರಿಕ್ ವಾಹನ ಜನಸಾಮಾನ್ಯರು ಖರೀದಿಸುವಂತಿರಬೇಕು-ಬೊಮ್ಮಾಯಿ

Date:

ರಾಜ್ಯದಲ್ಲಿ ಹೈಡ್ರೋಜನ್ ಇಂಧನ ಉತ್ಪಾದಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ನಗರದಲ್ಲಿ ನಿನ್ನೆ ಶುಕ್ರವಾರ ಆಯೋಜಿಸಲಾಗಿದ್ದ ಇ.ವಿ ಅಭಿಯಾನ ಮತ್ತು 152 ಚಾರ್ಜಿಂಗ್ ಸ್ಟೇಷನ್‌ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಹೈಡ್ರೋಜನ್ ಇಂಧನ ತಯಾರಿ
ಸಲು ಈಗಾಗಲೇ 2 ಕಂಪನಿ ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೀಘ್ರ 3 ಘಟಕ ಗಳು ಕರ್ನಾ ಟಕದಲ್ಲಿ ಆರಂಭವಾಗಲಿವೆ. ಹೈಡ್ರೋಜನ್ ಇಂಧನ ನವೀಕರಿ ಸಬಹುದಾದ ಇಂಧನಗಳಲ್ಲೇ ಅತ್ಯು ತ್ತಮವಾಗಿದೆ. ಇದರಿಂದ, ಇಂಧನ ಉಳಿತಾಯವಾಗಲಿದೆ. ಕೇಂದ್ರ ಸರ್ಕಾ ರದ ನೆರವಿನಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಮುದ್ರದ ನೀರಿನಿಂದ ಅಮೋ ನಿಯಾ ತಯಾರಿಸಲು ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸ
ಲಾಗಿದೆ. ಡಿಎಪಿ ಗೊಬ್ಬರ ತಯಾರಿಸಲು ಅಮೋನಿಯಾವನ್ನು ಅತಿ ಹೆಚ್ಚು ಬಳಸಲಾಗುತ್ತಿದೆ. ಅಮೋನಿಯಾ ಉತ್ಪಾದಿಸಲು ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಭಾರತ ಹಾಗೂ ಕೊಲ್ಲಿ ದೇಶಗಳು ಹೊರತುಪಡಿಸಿದರೆ ಬೇರೆಲ್ಲಿಯೂ ಈ ರೀತಿ ತಂತ್ರಜ್ಞಾನ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಿಕ್‌ ವಾಹನ ಖರೀದಿ ದರ ಜನಸಾಮಾನ್ಯರಿಗೆ ನಿಲುಕುವಂತಿರ ಬೇಕು. ಉತ್ಪಾದಕರು ಈ ನಿಟ್ಟಿನಲ್ಲಿ ಚಿಂತಿಸಬೇಕು. ಎಲೆಕ್ಟ್ರಿಕಲ್‌ ವಾಹನಗಳಿಗಾಗಿ ಹೆಚ್ಚಿನ ಚಾರ್ಜಿಂಗ್ ಸ್ಟೇಷನ್‌ಗಳು ಹಾಗೂ ಬ್ಯಾಟರಿಗಳನ್ನು ಬದಲಾಯಿಸುವ ವ್ಯವಸ್ಥೆಯ ಕೇಂದ್ರ ಸ್ಥಾಪಿಸಲು ಮಹತ್ವ ನೀಡುವುದು ಅಗತ್ಯವಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಎಲೆಕ್ಟ್ರಿಕಲ್‌ ವಾಹನ ಬಳಕೆ ಮಾಡುತ್ತಿದೆ. ಮುಂಬರುವ ದಿನಗಳಲ್ಲಿ ಮಲ್ಟಿ ಎಕ್ಸಲ್‌ ಎಲೆಕ್ಟ್ರಿಕಲ್‌ ಟ್ರಕ್‌ ಸಹ ಮಾರುಕಟ್ಟೆಗೆ ಬಿಡುಗಡೆಯಾಗಲಿವೆ. ಆಗ ಸಾರಿಗೆ ಕ್ಷೇತ್ರದಲ್ಲಿ ಬದಲಾವಣೆಗಳಾಗಬಹುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...