ಪ್ರವಾದಿ ಮೊಹಮ್ಮದ್ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿಯ ನೂಪುರ್ ಶರ್ಮಾ ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಾಧೀಶರು ಈಗ ವೈಯಕ್ತಿಕ ಟೀಕೆಗಳನ್ನು ಎದುರಿಸುವಂತಾಗಿದೆ. ವಿಭಾಗೀಯ ನೀಡಿದ ತೀರ್ಪಿನ ಬಗ್ಗೆ ನ್ಯಾಯಾಧೀಶರ ಮೇಲೆ ವೈಯಕ್ತಿಕವಾಗಿ ದಾಳಿಯ ನಡೆಸುತ್ತಿದ್ದು ತೀವ್ರ ಟೀಕೆಗಳು ಕೇಳಿ ಬರುತ್ತಿವೆ.
ಇಂದು ನ್ಯಾಯಾಧೀಶರ ತೀರ್ಪುಗಳಿಂದ ವೈಯಕ್ತಿಕ ದಾಳಿಗಳು ಎದುರಿಸುತ್ತಿರುವುದು ತೀರಾ ಅಪಾಯಕಾರಿ ಸನ್ನಿವೇಶಕ್ಕೆ ಕಾರಣವಾಗುತ್ತವೆ ಎಂದು ಸುಪ್ರೀಂಕೋರ್ಟ್ ವಿಭಾಗೀಯ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರು ತಿಳಿಸಿದ್ದಾರೆ.
ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಅವರ ಮೌಖಿಕ ಹೇಳಿಕೆಗಳ ನಂತರ ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಇಬ್ಬರೂ ವೈಯಕ್ತಿಕ ಟೀಕೆಗಳನ್ನು ಎದುರಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧಕ್ಕೆ ಗುರಿಯಾಗಿದ್ದಾರೆ.
ದೇಶಾದ್ಯಂತ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲ ಎಫ್ಐಆರ್ ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಬೇಕು ಎಂದು ಕೋರಿ ನೂಪುರ್ ಶರ್ಮಾ ಸುಪ್ರೀಂಕೋರ್ಟ್ನ ಮೊರೆ ಹೋಗಿದ್ದರು. ತನ್ನ ಅರ್ಜಿಯಲ್ಲಿ, ತಾನು ಮತ್ತು ತನ್ನ ಕುಟುಂಬವು ಭದ್ರತಾ ಬೆದರಿಕೆಗಳನ್ನು ಎದುರಿಸುತ್ತಿದೆ. ತಮಗೆ ರಕ್ಷಣೆಯ ಅಗತ್ಯವಿದೆ ಎಂದು ಶರ್ಮಾ ಉಲ್ಲೇಖಿಸಿದ್ದರು.