Thursday, December 18, 2025
Thursday, December 18, 2025

ರಾಜ್ಯ ನೌಕರರಿಗೆ ತುಟ್ಟಿಭತ್ಯೆ ಕೊಡುಗೆ

Date:

ರಾಜ್ಯದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸರ್ಕಾರ ದೀಪಾವಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವದ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಕೆಲ ದಿನಗಳ ಹಿಂದೆಯಷ್ಟೇ ಶೇ.3 ರಷ್ಟು ತುಟ್ಟಿಭತ್ತೆ ಹೆಚ್ಚಿಸಿತ್ತು. ಈಗ ರಾಜ್ಯ ಸರ್ಕಾರಿ ನೌಕರರಿಗೂ ಇದೇ ಸೌಲಭ್ಯ ಒದಗಿಸಲಾಗಿದ್ದು ಹಣಕಾಸು ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.
ಮೂಲ ವೇತನದಲ್ಲಿ ಶೇಕಡಾ ಮೂರರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಿಸಿ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಆದೇಶಿಸಿದೆ.
ರಾಜ್ಯದ 5.50 ಲಕ್ಷ ನೌಕರರು ಹಾಗೂ 5 ಲಕ್ಷ ಪಿಂಚಣಿದಾರರು ಸೇರಿದಂತೆ ಒಟ್ಟು 10.50 ಲಕ್ಷ ಮಂದಿ ತುಟ್ಟಿಭತ್ಯೆ ಹೆಚ್ಚಳದ ಲಾಭ ಪಡೆಯಲಿದ್ದಾರೆ.
ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 6,616 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದರೊಂದಿಗೆ ವೇತನ ಮತ್ತು ಪಿಂಚಣಿ ಭರಿಸಲೆಂದು ವಾರ್ಷಿಕ 75,000 ಕೋಟಿ ರೂಪಾಯಿಗಳನ್ನು ಸರ್ಕಾರ ವ್ಯಯ ಮಾಡುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...