Friday, February 6, 2026
Friday, February 6, 2026

ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ- ಸಚಿವ ನಾಗೇಶ್

Date:

ಶಾಲೆಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಬಹಳ ಖುಷಿಯಿಂದ ಆಗಮಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಕೆಲವು ಸಮಸ್ಯೆ ಎದುರಾಗುತ್ತಿರುವುದು ಪೋಷಕರ ತಲೆ ನೋವನ್ನು ಹೆಚ್ಚಿಸಿದೆ. ಶಾಲೆಗೆ ಹೋಗುವ ಮಕ್ಕಳ ಬ್ಯಾಗ್ ಹೊರೆಯಾಗಿದ್ದು ಇದರಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಿದೆ. ಇದಕ್ಕಾಗಿ ಶಿಕ್ಷಣ ಇಲಾಖೆ ಶನಿವಾರ ಬ್ಯಾಗ್ ಲೆಸ್ ಡೇಯನ್ನಾಗಿ ಮಾಡಲು ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳ ಬ್ಯಾಗ್ ಹೊರೆಯನ್ನು ಇಳಿಸುವ ದೃಷ್ಟಿಯಿಂದಲೇ ಸೆಮಿಸ್ಟರ್ ಪದ್ದತಿಯನ್ನು ರೂಡಿದೆ ತರಲಾಗಿತ್ತು. ಆದರೂ ವಿದ್ಯಾಾರ್ಥಿಗಳ ಬ್ಯಾಗ್ ಹೆಚ್ಚು ಭಾರವಾಗುತ್ತಿದೆ. ಮಕ್ಕಳು ತೂಕದ ಬ್ಯಾಗ್ ಅನ್ನು ಹೊತ್ತು ತರುವುದರಿಂದ ದೇಹ ರಚನೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಬೆನ್ನು ನೋವು ಕಾಣಿಸುಕೊಳ್ಳುತ್ತಿರುವುದು ಪೋಷಕನರನ್ನು ಆತಂಕಕ್ಕೆ ದೂಡಿತ್ತು. ಇದರ ಪರಿಣಾಮವೇ ನೋ ಬ್ಯಾಗ್ ಡೇ ಚಿಂತನೆಯಾಗಿದೆ.

ಮಕ್ಕಳ ಬ್ಯಾಗ್ ಹೊರೆಯನ್ನು ತಗ್ಗಿಸಲು ಮತ್ತು ಮಕ್ಕಳ ದೈಹಿಕ ಶಕ್ತಿಯನ್ನು ವೃದ್ಧಿಸುವಂತೆ ಮಾಡಲು ಶಿಕ್ಷಣ ಇಲಾಖೆ ಪ್ರತಿ ಶನಿವಾರವನ್ನು ಬ್ಯಾಗ್ ಲೆಸ್ ಡೇಯನ್ನಾಗಿ ಮಾಡುವ ಚಿಂತನೆಯನ್ನು ಮಾಡುತ್ತಿದೆ. ಪ್ರತಿ ಶನಿವಾರ ಮಕ್ಕಳಿಗೆ ಯೋಗ ತರಗತಿಯನ್ನು ಮತ್ತು ಕ್ರೀಡೆಗೆ ಮಕ್ಕಳನ್ನು ಬಿಡುವುದರಿಂದ ಮಕ್ಕಳ ದೈಹಿಕ ಸಾಮರ್ಥ್ಯವೂ ವೃದ್ಧಿಯಾಗುತ್ತದೆ.
ವ್ಯಾಯಾಮದಿಂದ ಮಾನಸಿಕ ಶಕ್ತಿಯು ವೃದ್ಧಿಸುತ್ತದೆ ಎಂದು ಶಿಕ್ಷಣ ಇಲಾಖೆ ಚಿಂತನೆಯನ್ನು ಮಾಡಿದೆ.
ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯುತ್ತಿದೆ. ಮಕ್ಕಳು ಬ್ಯಾಗ್ ಹೊರೆಯನ್ನು ತಗ್ಗಿಸಲು ಕ್ರಮವನ್ನು ಕೈಗೊಳ್ಳಲಾಗುತ್ತದೆ.

ವೇಳಾಪಟ್ಟಿಗೆ ಅನುಗುಣವಾಗಿ ಬ್ಯಾಗ್ ತರಲು ಸೂಚನೆಯನ್ನು ಮುಖ್ಯೋಪಾಯದ್ಯಾಯರು ನೀಡಬೇಕು. ಪ್ರತಿ ಶನಿವಾರ ಬ್ಯಾಗ್ ಲೆಸ್ ಡೇ ಮಾಡಲು ಸಹ ಚಿಂತನೆಯನ್ನು ಮಾಡಲಾಗುತ್ತಿದ್ದು ಈ ದಿನದಂದು ಮಕ್ಕಳಿಗೆ ಕ್ರೀಡೆಯಲ್ಲಿ ತೊಡಗಿಸುವ ಮತ್ತು ಯೋಗವನ್ನು ಹೇಳಿಕೊಡುವ ಮೂಲ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...