Thursday, February 5, 2026
Thursday, February 5, 2026

ಶಿವಮೊಗ್ಗದಿಂದ ಬೆಂಗಳೂರು ರೈಲ್ವೆ ಸಂಚಾರ ಮಾಹಿತಿ

Date:

ಕಾಮಗಾರಿ ಕಾರಣದಿಂದಾಗಿ ಭಾಗಶಃ ಹಾಗೂ ಪೂರ್ಣ ಪ್ರಮಾಣದಲ್ಲಿ ರೈಲುಗಳ ಸಂಚಾರ ಕಡಿತಗೊಂಡಿತ್ತು. ಇದೀಗ ಇದೇ ಜುಲೈ 9 ಹಾಗೂ 10 ರಂದು ರೈಲುಗಳು ಈ ಎಲ್ಲಾ ಪ್ರದೇಶಗಳಲ್ಲಿ ಮತ್ತೆ ಓಡಾಟ ಆರಂಭಿಸಲಿದೆ. ಮತ್ತೆ ಓಡಾಡಲಿರುವ ರೈಲುಗಳ ವಿವರ ಇಲ್ಲಿದೆ.

ಮೈಸೂರು ವಿಭಾಗದ ಬಾಣಾವರ ರೈಲು ಮಾರ್ಗದಲ್ಲಿ ನಡೆಯುತ್ತಿದ್ದ ಇಂಜಿನಿಯರಿಂಗ್ ಕಾಮಗಾರಿ ಹಿನ್ನೆಲೆ ಭಾಗಶಃ ಹಾಗೂ ಪೂರ್ಣವಾಗಿ ಸ್ಥಗಿತಗೊಂಡಿದ್ದ ರೈಲುಗಳ ಪುನರ್ ಸಂಚಾರವನ್ನು ಆರಂಭಿಸುವುದಾಗಿ ನೈಋತ್ಯ ರೈಲ್ವೇ ವಲಯವು ತಿಳಿಸಿದೆ.

ಈ ಮಾರ್ಗದಲ್ಲಿ ರೈಲುಗಳ ಓಡಾಟ ಆರಂಭವಾಗುವುದರ ಜೊತೆಗೆ ಶಿವಮೊಗ್ಗ ನಗರದಿಂದ ಓಡಾಡುತ್ತಿದ್ದ ರೈಲುಗಳು ಮತ್ತೆ ಸಂಚಾರ ಆರಂಭಿಸಲಿದೆ.

ಹೀಗಾಗಿ ಪ್ರಯಾಣಿಕರು ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ತುಮಕೂರು ನಡುವೆ ಓಡಾಡುತ್ತಿದ್ದ ರೈಲುಗಳಲ್ಲಿ ಸಂಚಾರ ಮಾಡಬಹುದಾಗಿದೆ.

ತುಮಕೂರು- ಶಿವಮೊಗ್ಗ ದಿನಂಪ್ರತಿ ಓಡಾಡುತ್ತಿದ್ದ ಎಕ್ಸ್ ಪ್ರೆಸ್ ರೈಲು , ಬೆಂಗಳೂರು- ಶಿವಮೊಗ್ಗ ನಡುವೆ ಓಡಾಡುತ್ತಿದ್ದ ಜನ್ಮ ಶತಾಬ್ದಿ ರೈಲು ಓಡಾಟ ನಡೆಸಲಿದೆ.

ಇದೇ ಜುಲೈ 10 ರಂದು ಈ ಪ್ರದೇಶಗಳಲ್ಲಿ ರೈಲು ಸಂಚಾರ ಮರು ಓಡಾಟ ಆರಂಭಿಸಲಿದೆ. ಶಿವಮೊಗ್ಗ ನಗರದಿಂದ ತುಮಕೂರು ನಡುವೆ ಸಂಚರಿಸುತ್ತಿದ್ದ ರೈಲು, ಅರಸೀಕೆರೆ – SSS ಹುಬ್ಬಳ್ಳಿ ಎಕ್ಸ್ ಪ್ರೆಸ್, ಶಿವಮೊಗ್ಗ ನಗರದಿಂದ ಬೆಂಗಳೂರು ಜನ್ಮ ಶತಾಬ್ದಿ ಎಕ್ಸ್ ಪ್ರೆಸ್ ಓಡಾಟ ನಡೆಸಲಿದೆ.

ಇದೇ ಜುಲೈ 9 ರಂದು ಹರಿಹರದಿಂದ ದಾವಣಗೆರೆ, ಶಿವಮೊಗ್ಗ ನಗರದಿಂದ ಬೆಂಗಳೂರು ನಡುವೆ ಸಂಚರಿಸುವ ಜನ್ಮ ಶತಾಬ್ದಿ ಎಕ್ಸ್ ಪ್ರೆಸ್ ರೈಲು , ಹುಬ್ಬಳ್ಳಿ- ಅರಸೀಕೆರೆ ಎಕ್ಸ್ ಪ್ರೆಸ್ ಈ ಎಲ್ಲಾ ರೈಲುಗಳು ಹಿಂದೆ ಯಾವ ಸಮಯಕ್ಕೆ ಓಡಾಟ ನಡೆಸುತ್ತಿದ್ದವೋ ಅದೇ ಸಮಯಕ್ಕೆ ಓಡಾಟ ನಡೆಸಲಿರುವುದಾಗಿ ರೈಲ್ವೇ ಇಲಾಖೆಯು ತಿಳಿಸಿದೆ.

ರೈಲ್ವೇ ಸಂಬಂಧಿತ ಯಾವುದೇ ದೂರು, ಸಲಹೆ, ಮಾಹಿತಿ ಹಾಗೂ ಇನ್ನಿತರ ವಿಚಾರಣೆಗಳಿಗಾಗಿ ಸಹಾಯವಾಣಿ ಸಂಖ್ಯೆ 139 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...