Saturday, April 18, 2026
Saturday, April 18, 2026

ಅಗ್ನಿಪಥ್ ವಿರುದ್ಧ ಪ್ರತಿಭಟನೆ ತಪ್ಪುತಿಳುವಳಿಕೆಯಿಂದ ಆಗಿದೆ-ಲೆ.ಪ್ರತಾಪ್

Date:

ಅಗ್ನಿಪಥ್ ಯೋಜನೆ ಮೂಲಕ ಭಾರತೀಯ ಸೇನಾಪಡೆಯಲ್ಲಿ ಅಗ್ನಿವೀರರನ್ನು ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ತೀರ್ಮಾನಿಸಲಾಗಿದೆ. ಇದಕ್ಕೆ ಪೂರಕವಾಗಿ ಸೇನಾ ಪಡೆ, ವಾಯುಪಡೆ ಹಾಗೂ ನೌಕಾಪಡೆಯಲ್ಲಿ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಿವೆ. ಲಕ್ಷಾಂತರ ಸಂಖ್ಯೆಯಲ್ಲಿ ಯುವ ಜನತೆ ಅಗ್ನಿವೀರರಾಗಲು ತಮ್ಮ ಅರ್ಜಿ ಸಲ್ಲಿಸಿದ್ದಾರೆ.

ಇದರ ಮಧ್ಯೆ ಅಗ್ನಿಪಥ್ ಯೋಜನೆ ಘೋಷಿಸಿದ ವೇಳೆ ರಾಜಸ್ಥಾನ ಬಿಹಾರ, ಜಾರ್ಖಂಡ್ಗಳಲ್ಲಿ ಪ್ರತಿಭಟನೆ ನಡೆಸಿದ್ದ ಯುವಕರು ಸರ್ಕಾರಿ ಆಸ್ತಿಪಾಸ್ತಿಗೆ ಅಪಾರ ಹಾನಿ ಮಾಡಿದ್ದರು. ರೈಲುಗಳಿಗೆ ಬೆಂಕಿ ಹಚ್ಚಿದ ಘಟನೆಯೂ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ನಷ್ಟ ಸಂಭವಿಸಿತ್ತು.
ಇದೀಗ ಅಗ್ನಿಪಥ್ ಯೋಜನೆ ಕುರಿತಂತೆ ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ‘ಇಂಡಿಯಾ ಟುಡೇ ಕಾನ್ಕ್ಲೇವ್ ಈಸ್ಟ್ 2022’ ದಿಲ್ಲಿ ಮಾತನಾಡಿದ ಅವರು 2030 ರ ವೇಳೆಗೆ ಭಾರತೀಯ ಸೇನೆಯಲ್ಲಿ ಶೇಕಡಾ 50ರಷ್ಟು ಅಗ್ನಿವೀರರು ಇರಲಿದ್ದಾರೆ ಎಂದು ತಿಳಿಸಿದ್ದಾರೆ.

‘ಅಗ್ನಿಪಥ್’ ಯೋಜನೆಯನ್ನು ಘೋಷಿಸುವ ಮುನ್ನ ಇದರ ಸಾಧಕ ಬಾಧಕಗಳನ್ನು ಅಮೂಲಾಗ್ರವಾಗಿ ಪರಿಶೀಲಿಸಲಾಗಿತ್ತು. ಎಲ್ಲ ಚರ್ಚೆಗಳನ್ನು ನಡೆಸಿದ ಬಳಿಕ ಯೋಜನೆ ಯುವ ಜನತೆಗೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಅಂತಿಮವಾಗಿ ಇದಕ್ಕೆ ಅನುಮೋದನೆ ನೀಡಲಾಯಿತು ಎಂದು ಹೇಳಿದ್ದಾರೆ.

ಇನ್ನು ಯೋಜನೆ ವಿರುದ್ಧ ನಡೆದ ಹಿಂಸಾತ್ಮಕ ಪ್ರತಿಭಟನೆ ಕುರಿತು ಮಾತನಾಡಿದ ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್, ತಪ್ಪು ಗ್ರಹಿಕೆಯಿಂದ ಇದು ಆಗಿದ್ದು, ಯುವ ಜನತೆಗೆ ಯೋಜನೆ ಕುರಿತು ಸವಿವರವಾಗಿ ತಿಳಿದುಕೊಳ್ಳಬೇಕಾಗಿತ್ತು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...