Monday, October 7, 2024
Monday, October 7, 2024

ಅಗ್ನಿಪಥ್ ವಿರುದ್ಧ ಪ್ರತಿಭಟನೆ ತಪ್ಪುತಿಳುವಳಿಕೆಯಿಂದ ಆಗಿದೆ-ಲೆ.ಪ್ರತಾಪ್

Date:

ಅಗ್ನಿಪಥ್ ಯೋಜನೆ ಮೂಲಕ ಭಾರತೀಯ ಸೇನಾಪಡೆಯಲ್ಲಿ ಅಗ್ನಿವೀರರನ್ನು ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ತೀರ್ಮಾನಿಸಲಾಗಿದೆ. ಇದಕ್ಕೆ ಪೂರಕವಾಗಿ ಸೇನಾ ಪಡೆ, ವಾಯುಪಡೆ ಹಾಗೂ ನೌಕಾಪಡೆಯಲ್ಲಿ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಿವೆ. ಲಕ್ಷಾಂತರ ಸಂಖ್ಯೆಯಲ್ಲಿ ಯುವ ಜನತೆ ಅಗ್ನಿವೀರರಾಗಲು ತಮ್ಮ ಅರ್ಜಿ ಸಲ್ಲಿಸಿದ್ದಾರೆ.

ಇದರ ಮಧ್ಯೆ ಅಗ್ನಿಪಥ್ ಯೋಜನೆ ಘೋಷಿಸಿದ ವೇಳೆ ರಾಜಸ್ಥಾನ ಬಿಹಾರ, ಜಾರ್ಖಂಡ್ಗಳಲ್ಲಿ ಪ್ರತಿಭಟನೆ ನಡೆಸಿದ್ದ ಯುವಕರು ಸರ್ಕಾರಿ ಆಸ್ತಿಪಾಸ್ತಿಗೆ ಅಪಾರ ಹಾನಿ ಮಾಡಿದ್ದರು. ರೈಲುಗಳಿಗೆ ಬೆಂಕಿ ಹಚ್ಚಿದ ಘಟನೆಯೂ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ನಷ್ಟ ಸಂಭವಿಸಿತ್ತು.
ಇದೀಗ ಅಗ್ನಿಪಥ್ ಯೋಜನೆ ಕುರಿತಂತೆ ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ‘ಇಂಡಿಯಾ ಟುಡೇ ಕಾನ್ಕ್ಲೇವ್ ಈಸ್ಟ್ 2022’ ದಿಲ್ಲಿ ಮಾತನಾಡಿದ ಅವರು 2030 ರ ವೇಳೆಗೆ ಭಾರತೀಯ ಸೇನೆಯಲ್ಲಿ ಶೇಕಡಾ 50ರಷ್ಟು ಅಗ್ನಿವೀರರು ಇರಲಿದ್ದಾರೆ ಎಂದು ತಿಳಿಸಿದ್ದಾರೆ.

‘ಅಗ್ನಿಪಥ್’ ಯೋಜನೆಯನ್ನು ಘೋಷಿಸುವ ಮುನ್ನ ಇದರ ಸಾಧಕ ಬಾಧಕಗಳನ್ನು ಅಮೂಲಾಗ್ರವಾಗಿ ಪರಿಶೀಲಿಸಲಾಗಿತ್ತು. ಎಲ್ಲ ಚರ್ಚೆಗಳನ್ನು ನಡೆಸಿದ ಬಳಿಕ ಯೋಜನೆ ಯುವ ಜನತೆಗೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಅಂತಿಮವಾಗಿ ಇದಕ್ಕೆ ಅನುಮೋದನೆ ನೀಡಲಾಯಿತು ಎಂದು ಹೇಳಿದ್ದಾರೆ.

ಇನ್ನು ಯೋಜನೆ ವಿರುದ್ಧ ನಡೆದ ಹಿಂಸಾತ್ಮಕ ಪ್ರತಿಭಟನೆ ಕುರಿತು ಮಾತನಾಡಿದ ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್, ತಪ್ಪು ಗ್ರಹಿಕೆಯಿಂದ ಇದು ಆಗಿದ್ದು, ಯುವ ಜನತೆಗೆ ಯೋಜನೆ ಕುರಿತು ಸವಿವರವಾಗಿ ತಿಳಿದುಕೊಳ್ಳಬೇಕಾಗಿತ್ತು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...