Wednesday, July 8, 2026
Wednesday, July 8, 2026

ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ಆಯ್ಕೆ ಪಟ್ಟಿ

Date:

ಒಲಿಂಪಿಕ್ ಸ್ವರ್ಣ ವಿಜೇತ ನೀರಜ್ ಚೋಪ್ರಾ, ಫುಟ್ಬಾಲ್ ತಾರೆ ಸುನಿಲ್ ಛೇಟ್ರಿ,ಮಹಿಳಾ ಕ್ರಿಕೆಟರ್ ಮಿಥಾಲಿ ಸೇರಿದಂತೆ 11 ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪುರಸ್ಕಾರ, ಮತ್ತು 35 ಕ್ರೀಡಾ ಸಾಧಕರ ಹೆಸರುಗಳನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಟೋಕಿಯೋದಲ್ಲಿ ಬೆಳ್ಳಿ ಪದಕ ಗೆದ್ದ ಕುಸ್ತಿಪಟು ರವಿ ದಹಿಯಾ, ಕಂಚಿನ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೋರ್ಗೂಹೈನ್, ಭಾರತದ ಹಾಕಿ ತಂಡದ ಗೋಲ್ ಕೀಪರ್ ಶ್ರೀಜೇಶ್,
ಪ್ಯಾರಾಲಿಂಪಿಕ್ಸ್ ಪದಕ ವಿಜೇತರಾದ ಶೂಟರ್ ಅವನಿ ಲೇಖರ, ಮನೀಷ್ ನರ್ವಾಲ್, ಜಾವೆಲಿನ್ ಥ್ರೋ ಅಥ್ಲೀಟ್ ಸುಮಿತ್ ಅಂಟಿಲ್, ಬ್ಯಾಡ್ಮಿಂಟನ್ ಆಟಗಾರರಾದ ಪ್ರಮೋದ್ ಭಗತ್, ಕೃಷ್ಣ ನಾಗರ್ ಅವರಿಗೆ ಖೇಲ್ ರತ್ನ, ಹಾಗೂ ಹೆಮ್ಮೆಯ ಕನ್ನಡಿಗ ಸುಹಾಸ್ ಯತಿರಾಜ್ ಅವರ ಹೆಸರು ಅರ್ಜುನ ಪ್ರಶಸ್ತಿ ಆಯ್ಕೆ ಪಟ್ಟಿಯಲ್ಲಿದೆ. ಈ ಎಲ್ಲಾ ಹೆಸರುಗಳನ್ನು ಶಿಫಾರಸು ಮಾಡಿ ಆಯ್ಕೆ ಪಟ್ಟಿಯನ್ನು ಕ್ರೀಡಾ ಸಚಿವಾಲಯಕ್ಕೆ ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...