Wednesday, June 24, 2026
Wednesday, June 24, 2026

ಭದ್ರಾ ಜಲಾಶಯಕ್ಕೆ ಮೂರು ಅಡಿ ನೀರು ಹೆಚ್ಚಳ

Date:

ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ನದಿ ಪಾತ್ರದ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದೆ. ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ.

ಜುಲೈ ತಿಂಗಳ ಮೊದಲ 4 ದಿನಗಳಲ್ಲಿ ಜಲಾಶಯದಲ್ಲಿ ನೀರಿನ ಪ್ರಮಾಣ 3 ಅಡಿಯಷ್ಟು ಹೆಚ್ಚಳಗೊಂಡಿದೆ.

ಆರಿದ್ರೆಯ ಆರ್ಭಟದ ಫಲವಾಗಿ ಜುಲೈ 1ರಿಂದ 4ರವರೆಗೆ ಭದ್ರಾ ಜಲಾಶಯಕ್ಕೆ 33,964 ಕ್ಯುಸೆಕ್ ನೀರು ಹರಿದುಬಂದಿದೆ. ಜುಲೈ 1ರಂದು 3,717 ಕ್ಯುಸೆಕ್ ಇದ್ದ ಒಳಹರಿವಿನ ಪ್ರಮಾಣ, ಸೋಮವಾರ 13,405 ಕ್ಯುಸೆಕ್‌ಗೆ ಹೆಚ್ಚಳಗೊಂಡಿತ್ತು. ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 186 ಅಡಿ ಇದ್ದು, ಜಲಾಶಯದಲ್ಲಿ ಶುಕ್ರವಾರ 152.6 ಅಡಿ ಇದ್ದ ನೀರಿನ ಪ್ರಮಾಣ ಸೋಮವಾರ 155.7 ಅಡಿಗೆ ಏರಿಕೆಯಾಗಿತ್ತು. ಮುಂಗಾರು ಹಂಗಾಮಿನ ಬೆಳೆಗಳಿಗಾಗಿ ಜಲಾಶಯದಿಂದ ಕಾಲುವೆಗೆ ನೀರು ಹರಿಸಲು ನೀರಿನ ಮಟ್ಟ 165 ಅಡಿಗೆ ಹೆಚ್ಚಳವಾಗಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...