Thursday, August 13, 2026
Thursday, August 13, 2026

ನಾಟಕ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಘಟನೆಸಾಂಸ್ಕೃತಿಕ ಭಯೋತ್ಪಾದನೆ- ಸಿದ್ಧರಾಮಯ್ಯ

Date:

ಶಿವಮೊಗ್ಗದ ಆನವಟ್ಟಿಯಲ್ಲಿ ‘ರಂಗಬೆಳಕು’ ತಂಡ ಪ್ರಸ್ತುತ ಪಡಿಸುತ್ತಿದ್ದ ‘ಜತೆಗಿರುವನು ಚಂದಿರ’ ಪ್ರದರ್ಶನಕ್ಕೆ ಆರೆಸ್ಸೆಸ್‌ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ರಾತ್ರಿ ಆಯೋಜಿಸಿದ್ದ ಈ ನಾಟಕ ಪ್ರದರ್ಶನಕ್ಕೆ ಬಜರಂಗದಳ, ಆರೆಸ್ಸೆಸ್‌ ಕಾರ್ಯಕರ್ತರು ಅಡ್ಡಿಪ‍ಡಿಸಿದ್ದರು.
ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ,‌ ನಾಟಕ, ಕಲೆ‌ ಮೊದಲಾದ‌‌ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರೆಸ್ಸೆಸ್‌ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ- ಆತಂಕಗಳನ್ನು ಎದುರಿಸುವ ಚೈತನ್ಯ‌ ಕನ್ನಡದ ಸಾಂಸ್ಕೃತಿಕ‌ ಲೋಕಕ್ಕೆ ಇದೆ’ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...