Friday, February 6, 2026
Friday, February 6, 2026

ನಾಟಕ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಘಟನೆಸಾಂಸ್ಕೃತಿಕ ಭಯೋತ್ಪಾದನೆ- ಸಿದ್ಧರಾಮಯ್ಯ

Date:

ಶಿವಮೊಗ್ಗದ ಆನವಟ್ಟಿಯಲ್ಲಿ ‘ರಂಗಬೆಳಕು’ ತಂಡ ಪ್ರಸ್ತುತ ಪಡಿಸುತ್ತಿದ್ದ ‘ಜತೆಗಿರುವನು ಚಂದಿರ’ ಪ್ರದರ್ಶನಕ್ಕೆ ಆರೆಸ್ಸೆಸ್‌ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ರಾತ್ರಿ ಆಯೋಜಿಸಿದ್ದ ಈ ನಾಟಕ ಪ್ರದರ್ಶನಕ್ಕೆ ಬಜರಂಗದಳ, ಆರೆಸ್ಸೆಸ್‌ ಕಾರ್ಯಕರ್ತರು ಅಡ್ಡಿಪ‍ಡಿಸಿದ್ದರು.
ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ,‌ ನಾಟಕ, ಕಲೆ‌ ಮೊದಲಾದ‌‌ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರೆಸ್ಸೆಸ್‌ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ- ಆತಂಕಗಳನ್ನು ಎದುರಿಸುವ ಚೈತನ್ಯ‌ ಕನ್ನಡದ ಸಾಂಸ್ಕೃತಿಕ‌ ಲೋಕಕ್ಕೆ ಇದೆ’ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...