Friday, March 14, 2025
Friday, March 14, 2025

ಮಹಿಳಾ ಸಬಲೀಕರಣ ಧರ್ಮಸ್ಥಳ ಸಂಸ್ಥೆ ಧ್ಯೇಯ-ವೀರೇಂದ್ರಹೆಗ್ಡೆ

Date:

ರಾಜ್ಯದಲ್ಲಿ ಮಹಿಳಾ ಸಬಲೀಕರಣವೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಉದ್ದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ.

ಮಧುಗಿರಿಯಲ್ಲಿ ನಡೆದ ಸ್ವ ಉದ್ಯೋಗ ಮೇಳ ಮತ್ತು ಸಾಧನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಬಡತನ ಹೋಗಲಾಡಿಸಲು ಯೋಜನೆಯು ಸದಾ ಸಿದ್ಧವಿದೆ.

ಅದರಂತೆ ಸಾಮಾಜಿಕ ಸಾಮರಸ್ಯ ಬೆಸೆಯಲು ಜಾತಿ, ಧರ್ಮ ಮೀರಿ ಸದಸ್ಯರನ್ನು ಹೊಂದಿದೆ. ಎಲ್ಲ ಸಮಸ್ಯೆಗೂ ಸಂಘದಲ್ಲಿ ಪರಿಹಾರವಿದೆ. ಸಂಘವು ಶಿಕ್ಷಣ ಮತ್ತು ಸ್ವ ಸಾಮರ್ಥ್ಯವನ್ನು ನೀಡಲಿದೆ. ದುಡಿದ ಸಂಪತ್ತು ಸೋರಿಕೆಯಾಗದಂತೆ ಆರ್ಥಿಕವಾದ ಸ್ವಾವಲಂಬನೆಯ ಬದುಕನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಡಾ.ಜಿ. ಪರಮೇಶ್ವರ್‌ ಇನ್ನೂ ಮುಂತಾದವರು ಗಣ್ಯರಿದ್ದರು.

ಹೆಗ್ಗಡೆ ಸಂಸ್ಕೃತಿಯ ರಾಯಭಾರಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ವಿ. ವೀರಭದ್ರಯ್ಯ ಮಾತನಾಡಿ, ರಾಜ್ಯದ ಬಡವರ ಸಬಲೀಕರಣಕ್ಕೆ ಪೂಜ್ಯರು ಮಂಜುನಾಥನ ಆಜ್ಞೆಯಂತೆ ಮುಂದಡಿಯಿಟ್ಟಿದ್ದಾರೆ. ಅವರು ನಡೆದಾಡುವ ಮಂಜುನಾಥನೇ ಆಗಿದೆ. ಈ ಕಾರ್ಯಕ್ಕೆ ನಾವೆಲ್ಲ ಜತೆಯಾಗಬೇಕು. ಕ್ಷೇತ್ರದಲ್ಲಿ ಮಹಿಳೆಯರಿಗಾಗಿ ಸಹದ್ಯೋಗ ಸೃಷ್ಟಿಗೆ ಪೂಜ್ಯ ಡಾ. ಹೆಗ್ಗಡೆ ಅವರು ಮತ್ತಷ್ಟು ಪ್ರೋತ್ಸಾಹ ನೀಡಬೇಕು ಎಂದು ಹೇಳಿದ್ದಾರೆ.

ಸಂಘದ ಸದಸ್ಯರ 10 ರೂ. ಉಳಿತಾಯದಿಂದ 367 ಕೋಟಿ ರೂ. ಸಂಗ್ರಹವಾಗಿದ್ದು, 1,400 ಕೋಟಿ ರೂ. ಹಣವು ಸಾಲದ ರೂಪದಲ್ಲಿ ಬಳಕೆಯಾಗಿ ಮರುಪಾವತಿಯಾಗಿದೆ. ಸರಕಾರದ ಸವಲತ್ತುಗಳನ್ನು ಪರಿಚಯ ಮಾಡಲು 326 ಸೇವಾ ಕೇಂದ್ರಗಳನ್ನು ಸ್ಥಾಪಿಸಿದೆಸಾರ್ವಜನಿಕರಿಗೆ ಯೋಜನೆಯ ಅರಿವು ಹಾಗೂ ಲಾಭವನ್ನು ತಂದುಕೊಡಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...