Thursday, August 6, 2026
Thursday, August 6, 2026

ಕೇಂದ್ರ ಸಚಿವ ಅಬ್ಬಾಸ್ ನಖ್ವಿ ರಾಜಿನಾಮೆ

Date:

ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಆರ್.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ್ದಾರೆ

ರಾಜ್ಯಸಭಾ ಸದಸ್ಯತ್ವ ಜುಲೈ 7 ರಂದು ಕೊನೆಗೊಳ್ಳಲಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದಾರೆ.

ನಾನು ಸಾಂವಿಧಾನಿಕ ಅವಶ್ಯಕತೆಗಳನ್ನು ಅನುಸರಿಸಬೇಕಾಗಿತ್ತು ಎಂದು ಮೋದಿ ಸರ್ಕಾರದಲ್ಲಿ ಮುಸ್ಲಿಂ ಮುಖವಾಗಿದ್ದ ನಖ್ವಿ ತಿಳಿಸಿದ್ದಾರೆ.

ರಾಜ್ಯಸಭೆಗೆ ಮರು ನಾಮನಿರ್ದೇಶನ ಪಡೆಯುವಲ್ಲಿ ವಿಫಲರಾದ ಉಕ್ಕು ಸಚಿವ ಆರ್‌.ಸಿ.ಪಿ. ಸಿಂಗ್ ಕೂಡ ತಮ್ಮ ಸ್ಥಾನ ತೊರೆದಿದ್ದಾರೆ. ಮೇಲ್ಮನೆಯಲ್ಲಿ ಅವರ ಅಧಿಕಾರಾವಧಿಯೂ ಗುರುವಾರ ಕೊನೆಗೊಳ್ಳಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಎನ್‌.ಡಿ.ಎ. ಮಿತ್ರಪಕ್ಷವಾದ ಜನತಾ ದಳ ನಾಯಕ ಸಿಂಗ್, ಅವರ ಪಕ್ಷದಿಂದ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಟಿಕೆಟ್ ನಿರಾಕರಿಸಲಾಗಿತ್ತು.

ರಾಜ್ಯಸಭೆಯಲ್ಲಿ ನಖ್ವಿ ಅವರ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದಂತೆ, ನರೇಂದ್ರ ಮೋದಿ ಸರ್ಕಾರದಲ್ಲಿ ಬಿಜೆಪಿಗೆ ಮುಸ್ಲಿಂ ಪ್ರಾತಿನಿಧ್ಯವಿಲ್ಲದಂತಾಗಿದೆ.

ನಖ್ವಿ ಅವರ ಭವಿಷ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲಾಗದ್ದರೂ, ಉಪ ರಾಷ್ಟ್ರಪತಿ ಸ್ಥಾನಕ್ಕೆ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂಬ ವದಂತಿಗಳು ಹರಡಿವೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...