Saturday, June 27, 2026
Saturday, June 27, 2026

ಭದ್ರಾ ಜಲಾಶಯ ನೀರಿನ ಮಟ್ಟ

Date:

ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯ ಪ್ರದೇಶ ಸುತ್ತಮುತ್ತ ಮಳೆ‌ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದು, ಒಳಹರಿವು ಸ್ವಲ್ಪ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ (ಜು.05) 30,167 ಕ್ಯೂಸೆಕ್ ಒಳ ಹರಿವು ಇತ್ತು. ಇಂದು (ಜು.06) 26,004 ಕ್ಯೂಸೆಕ್ ಒಳ ಹರಿವಿದ್ದು, ಸ್ವಲ್ಪ ತಗ್ಗಿದೆ. ಇಂದಿನ ನೀರಿನ ಮಟ್ಟ 160.11 ಅಡಿಗೆ ತಲುಪಿದೆ. ನಿನ್ನೆ 158.06 ಅಡಿ ಇತ್ತು.
ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಳ ಹರಿವು ಹೆಚ್ಚಳವಾಗಿದೆ.

ಈ ಮಳೆ ಮುಂಗಾರು ಹಂಗಾಮಿನ ಭತ್ತ ಬೆಳೆಯುವ ರೈತರ ಸಂತಸಕ್ಕೆ ಕಾರಣವಾಗಿದ್ದು, ಭತ್ತ ನಾಟಿಗೆ ಬೀಜ ಚೆಲ್ಲುವ ಕಾರ್ಯ ನಡೆಯುತ್ತಿದೆ.
ನೀರಿನ ಸಂಗ್ರಹದ ವಿವರ ಹೀಗಿದೆ.
ಇಂದಿನ ನೀರಿನ ಮಟ್ಟ 160.11 ಅಡಿ
ಪೂರ್ಣ ಮಟ್ಟ:186 ಅಡಿ
ಇಂದಿನ ಸಾಮರ್ಥ್ಯ: 43.771 ಟಿಎಂಸಿ
ಒಟ್ಟು ಸಾಮರ್ಥ್ಯ:71.535 ಟಿಎಂಸಿ
ಒಳಹರಿವು: 26004 ಕ್ಯೂಸೆಕ್
ಒಟ್ಟು ಹೊರಹರಿವು: 136 ಕ್ಯೂಸೆಕ್
ಬಲದಂಡೆ ನಾಲೆ: 0.00 ಕ್ಯೂಸೆಕ್
ಎಡದಂಡೆ ನಾಲೆ: 0.00ಕ್ಯೂಸೆಕ್
ಕಳೆದ ವರ್ಷ ಈ ದಿನ : 155.34 ಅಡಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...