Friday, August 7, 2026
Friday, August 7, 2026

ದೀನ್ ದಯಾಳ್ ಸ್ಪರ್ಶ್ ಯೋಜನೆ ವಿದ್ಯಾರ್ಥಿವೇತನ

Date:

ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಯನ್ನು ಉತ್ತೇಜಿಸಲು ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ ಅಡಿಯಲ್ಲಿ, ಸ್ಕಾಲರ್ ಶಿಪ್ ಪ್ರಶಸ್ತಿಗಾಗಿ 6ನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿಯಲ್ಲಿ 2021-22 ಶೈಕ್ಷಣಿಕ ವರ್ಷದಲ್ಲಿ, ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹಣೆಯ ಖಾತೆಯನ್ನು ಹೊಂದಿರುವ ಹಾಗೂ ಫಿಲಾಟೆಲಿಕ್ ಕ್ಲಬ್‍ ಸದಸ್ಯರನ್ನು ಹೊಂದಿರುವ ಮತ್ತು ಅಂಚೆಚೀಟಿ ಸಂಗ್ರಹಣೆಯನ್ನು ಹವ್ಯಾಸವಾಗಿ ಮುಂದುವರಿಸುವ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6 ಸಾವಿರ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಪಠ್ಯಕ್ರಮವನ್ನು, ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ, ಮಕ್ಕಳಲ್ಲಿ ಅಂಚೆಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ.

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಲೆವೆಲ್-1 ಅಂಚೆಚೀಟಿಗಳ ರಸಪ್ರಶ್ನೆ(ಲಿಖಿತ)ನಲ್ಲಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸಲು ಮಾಡಲು ಕೊನೆಯ ದಿನಾಂಕ ಸೆ. 7 ಆಗಿರುತ್ತದೆ. ಕರ್ನಾಟಕದ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ಸ್ಕಾಲರ್‍ಶಿಪ್ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರವರ ಕಚೇರಿಯ ಅಂಚೆ ಅಧೀಕ್ಷಕರು ಕೋರಿದ್ದಾರೆ.

ಅಂಚೆಚೀಟಿಗಳ ಸಂಗ್ರಹದ ರಸಪ್ರಶ್ನೆ(ಲಿಖಿತ) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆಚೀಟಿಗಳ ಸಂಗ್ರಹಣೆ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸರ್ಧಿಸಬೇಕಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....