Friday, August 7, 2026
Friday, August 7, 2026

ಪ್ರಾಕೃತಿಕ ವಿಕೋಪ: ಮನೆ ಹಾನಿಗೆ ₹5 ಲಕ್ಷದ ವರೆಗೆ ಪರಿಹಾರ-ಅಶೋಕ್

Date:

ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು.
ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದ 13 ಜಲಾಶಯಗಳಲ್ಲಿ 800 ಟಿಎಂಸಿ ನೀರು ಇದ್ದು, ಜಲಾಶಯದಲ್ಲಿ ಹೆಚ್ಚುವರಿ ನೀರನ್ನು ಸಂಗ್ರಹಿಸದೆ ನದಿಗೆ ನೀರು ಬಿಡುವಂತಾಗಲು ಕ್ರಮವಹಿಸಲಾಗಿದೆ. ಹಾಗೆಯೇ ಹೆಚ್ಚಿನ ಮಳೆಯಾಗುತ್ತಿರುವ ಏಳು ಜಿಲ್ಲೆಗಳಲ್ಲಿ ಜಿಲ್ಲಾಡಳಿತ ನಿರಂತರ ಸಂಪರ್ಕ ಸಾಧಿಸಿ ಯಾವುದೇ ರೀತಿಯ ಸಮಸ್ಯೆ ಉದ್ಭವವಾಗದಂತೆ ಗಮನಹರಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಅವರು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 18 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಉಳಿದಂತೆ ಇಲ್ಲಿಯ ವರೆಗೆ ಮೂರು ಜಿಲ್ಲೆಗಳಲ್ಲಿ (ಕೊಡಗು, ಹಾವೇರಿ, ಶಿವಮೊಗ್ಗ) ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

ಸದ್ಯ ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು. ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯದ ಯಾವ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ, ಜಾನುವಾರು ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲಾಗುವುದು. ಇದರಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....