Monday, March 16, 2026
Monday, March 16, 2026

ಪ್ರಾಕೃತಿಕ ವಿಕೋಪ: ಮನೆ ಹಾನಿಗೆ ₹5 ಲಕ್ಷದ ವರೆಗೆ ಪರಿಹಾರ-ಅಶೋಕ್

Date:

ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು.
ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದ 13 ಜಲಾಶಯಗಳಲ್ಲಿ 800 ಟಿಎಂಸಿ ನೀರು ಇದ್ದು, ಜಲಾಶಯದಲ್ಲಿ ಹೆಚ್ಚುವರಿ ನೀರನ್ನು ಸಂಗ್ರಹಿಸದೆ ನದಿಗೆ ನೀರು ಬಿಡುವಂತಾಗಲು ಕ್ರಮವಹಿಸಲಾಗಿದೆ. ಹಾಗೆಯೇ ಹೆಚ್ಚಿನ ಮಳೆಯಾಗುತ್ತಿರುವ ಏಳು ಜಿಲ್ಲೆಗಳಲ್ಲಿ ಜಿಲ್ಲಾಡಳಿತ ನಿರಂತರ ಸಂಪರ್ಕ ಸಾಧಿಸಿ ಯಾವುದೇ ರೀತಿಯ ಸಮಸ್ಯೆ ಉದ್ಭವವಾಗದಂತೆ ಗಮನಹರಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಅವರು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 18 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಉಳಿದಂತೆ ಇಲ್ಲಿಯ ವರೆಗೆ ಮೂರು ಜಿಲ್ಲೆಗಳಲ್ಲಿ (ಕೊಡಗು, ಹಾವೇರಿ, ಶಿವಮೊಗ್ಗ) ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

ಸದ್ಯ ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು. ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯದ ಯಾವ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ, ಜಾನುವಾರು ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲಾಗುವುದು. ಇದರಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಮಾರ್ಚ್ 17. ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.17 ರಂದು ಸಮಯ ಬೆಳಿಗ್ಗೆ...

Madhu Bangarappa ನೂತನ ಜೆಸಿಬಿ ಯಂತ್ರದ ಸೇರ್ಪಡೆಯಿಂದ ಕಾಮಗಾರಿಗಳು ಮತ್ತಷ್ಟು ಸುಗಮ- ಮಧು ಬಂಗಾರಪ್ಪ

Madhu Bangarappa ಎಸ್. ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ತಾಲೂಕಿನ ಆನವಟ್ಟಿ...

Madhu Bangarappa ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ- ಶೈಕ್ಷಣಿಕ ಪ್ರತಿಭೆ ಅನಾವರಣಕ್ಕೆ” ಡಿಜಿಟಲ್ ಸ್ಟುಡಿಯೊ” ಆರಂಭಿಸುವ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ- ಶೈಕ್ಷಣಿಕ ಪ್ರತಿಭೆ ಅನಾವರಣಗೊಳಿಸಲು ವೇದಿಕೆಯನ್ನು ಒದಗಿಸುವ...