Wednesday, December 10, 2025
Wednesday, December 10, 2025

ಜೆಂಟ್ಸ್ ಕ್ಲಿನಿಕ್; ರಾಜ್ಯದಲ್ಲಿ ಪ್ರಥಮ ಪ್ರಯೋಗ- ಅಶ್ವತ್ಥನಾರಾಯಣ

Date:

ಅನೇಕ ಬಗೆಯ ಸಂಕೀರ್ಣ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತದೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ದೇಶದಲ್ಲೇ ಅನನ್ಯವಾದ ಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯವನ್ನು ಆರಂಭಿಸುವ ಕುರಿತು ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರ ಜೊತೆ ಸಚಿವರು ಮಾತುಕತೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಸಚಿವರು, ಪುರುಷರೂ ಅನೇಕ, ಅನಾರೋಗ್ಯ ಸಮಸ್ಯೆಗನ್ನು ಎದುರಿಸುತ್ತಿರುತ್ತಿರುತ್ತಾರೆ. ಆದರೆ ಇವರಲ್ಲಿ ಹೆಚ್ಚಿನವರು ಆಸ್ಪತ್ರೆಗೇ ಬರುವುದಿಲ್ಲ. ಹೀಗಾಗಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಡಿಯಲ್ಲಿ ಈ ವಿನೂತನ ಯೋಜನೆಯನ್ನು ಎರಡೂ ಕಡೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ಇದಕ್ಕೆ ಸಿಕ್ಕುವ ಸ್ಪಂದನವನ್ನು ಆಧರಿಸಿ ಮುಂಬರುವ ದಿನಗಳಲ್ಲಿ ಇದನ್ನು ಎಲ್ಲೆಡೆಗೂ ವಿಸ್ತರಿಸಲಾಗುವುದು. ಈ ಯೋಜನೆಯಡಿ ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರು ವೈದ್ಯಕೀಯ ಪರೀಕ್ಷೆಗಳ ಸೌಲಭ್ಯ ಕಲ್ಪಿಸುತ್ತಾರೆ ಎಂದಿದ್ದಾರೆ.

ಮಧುಮೇಹ, ಕ್ಯಾನ್ಸರ್, ನರಕ್ಕೆ ಸಂಬಂಧಿಸಿದ ಕಾಯಿಲೆಗಳು, ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಪುರುಷರನ್ನು ಹೆಚ್ಚಾಗಿ ಕಾಡುತ್ತಿವೆ. ಇದರ ಜತೆಗೆ ಒತ್ತಡದ ಜೀವನ, ಧೂಮಪಾನ, ಮದ್ಯಪಾನ, ಅವೈಜ್ಞಾನಿಕ ಆಹಾರ ಸೇವನೆಯ ಕ್ರಮ ಇತ್ಯಾದಿಗಳೂ ಪುರುಷರ ಅನಾರೋಗ್ಯಕ್ಕೆ ಕಾರಣಗಳಾಗಿವೆ. ಈಗ ಕೈಗೆತ್ತಿಕೊಂಡಿರುವ ಯೋಜನೆಯಲ್ಲಿ ಜೀವನಶೈಲಿ ಮತ್ತು ಆಹಾರ ಸೇವನೆಗೆ ಸಂಬಂಧಿಸಿದ ದೋಷಗಳನ್ನು ಪರಿಹರಿಸಲು ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಕುಟುಂಬಗಳಿಗೆ ಪುರುಷರೇ ಆಧಾರಸ್ತಂಭದಂತೆ ಇರುತ್ತಾರೆ. ಆದ್ದರಿಂದ ಇಂತಹ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇದರಿಂದಾಗಿ ಸಂಭವನೀಯ ಅನಾರೋಗ್ಯವು ಸೃಷ್ಟಿಸುವ ಆರ್ಥಿಕ ಹೊರೆ ಮತ್ತಿತರ ಸಮಸ್ಯೆಗಳಿಂದ ಪಾರಾಗಬಹುದು ಎಂದು ಸಚಿವರು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...