Tuesday, February 3, 2026
Tuesday, February 3, 2026

ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್ ಭಾರತಕ್ಕೆ ಸರಣಿ ಕೈವಶ

Date:

ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಭಾರತ ತಂಡವು 49 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಆ ಮೂಲಕ 2-0 ಅಂತರದಲ್ಲಿ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ.

ಟಾಸ್ ಗೆದ್ದು ಮೊದಲು ಇಂಗ್ಲೆಂಡ್ ತಂಡವು ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು.ಭಾರತದ ಪರವಾಗಿ ರವಿಂದ್ರ ಜಡೇಜಾ 46, ರೋಹಿತ್ ಶರ್ಮಾ 31, ಹಾಗೂ ರಿಶಬ್ ಪಂತ್ 26 ರನ್ ಗಳ ನೆರವಿನಿಂದಾಗಿ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.ಇಂಗ್ಲೆಂಡ್ ತಂಡದ ಪರವಾಗಿ ಕ್ರಿಸ್ ಜೋರ್ಡಾನ್ 4 ಹಾಗೂ ರಿಚರ್ಡ್ ಗ್ಲೀಸನ್ 3 ವಿಕೆಟ್ ಗಳನ್ನು ಕಬಳಿಸುವ ಮೂಲಕ ಗಮನ ಸೆಳೆದರು.

ಭಾರತ ತಂಡವು ನೀಡಿದ 171 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು ಆರಂಭದಲ್ಲಿಯೇ ಭುವನೇಶ್ವರ ಕುಮಾರ್ ಅವರ ಮಾರಕ ದಾಳಿಗೆ ತತ್ತರಿಸಿತು, ಜೇಸನ್ ರಾಯ್ ಹಾಗೂ ಜೋಸ್ ಬಟ್ಲರ್ ಅವರ ವಿಕೆಟ್ ಗಳನ್ನು ಕಬಳಿಸುವ ಮೂಲಕ ಭಾರಿ ಆಘಾತ ನೀಡಿದರು.

ಇದಾದ ನಂತರ ಇಂಗ್ಲೆಂಡ್ ಚೇತರಿಸಿಕೊಳ್ಳಲೇ ಇಲ್ಲಾ, ಮಧ್ಯಮ ಕ್ರಮಾಂಕದಲ್ಲಿ ಮೊಯಿನ್ ಅಲಿ ಹಾಗೂ ಡೇವಿಡ್ ವಿಲ್ಲೆ ಕ್ರಮವಾಗಿ 35, 33 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ಸಹಿತ ಅಂತಹ ನಿರೀಕ್ಷಿತ ಪ್ರದರ್ಶನವನ್ನು ನೀಡಲಿಲ್ಲ. ಇದರಿಂದಾಗಿ 17 ಓವರ್ ಗಳಲ್ಲಿ ಕೇವಲ 121 ರನ್ ಗಳಿಗೆ ಇಂಗ್ಲೆಂಡ್ ತಂಡವು ಸರ್ವಪತನವನ್ನು ಕಂಡಿತು.

ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಭುವನೇಶ್ವರ ಕುಮಾರ್ ಮೂರು ವಿಕೆಟ್, ಹಾಗೂ ಬುಮ್ರಾ ಮತ್ತು ಚಹಾಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...