Monday, February 2, 2026
Monday, February 2, 2026

ನಮ್ಮ ದೇಶ,ಭಾಷೆ & ಧರ್ಮದ ಬಗ್ಗೆ ಎಲ್ಲರೂ ಹೆಮ್ಮೆಪಡಬೇಕು- ವೆಂಕಯ್ಯ ನಾಯ್ಡು

Date:

ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ. ಇದು ಯಾವುದೇ ಸರ್ಕಾರ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂಸ್ಥೆಯ ವಜ್ರ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಭಾರತವು ಯಾವುದೇ ದೇಶಗಳ ಮೇಲೆ ದಾಳಿ ನಡೆಸದೆ ಸಹಿಷ್ಣುತಾ ಮನೋಭಾವದಿಂದ ಇರುವುದು ದೇಶದ ಹಿರಿಮೆ ಮತ್ತು ಶ್ರೀಮಂತಿಕೆಯಾಗಿದೆ. ಇದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ತೋರಿಸುತ್ತದೆ ಎಂದು ಹೇಳಿದರು.

ದೇಶದಲ್ಲಿ ಧರ್ಮ ಪ್ರತಿಯೊಬ್ಬರ ವೈಯಕ್ತಿಕ ವಿಚಾರವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ. ಯಾರೊಬ್ಬರು ತಮ್ಮ ಧರ್ಮದ ಬಗ್ಗೆ ಹೆಮ್ಮೆ ಪಡಬಹುದು ಮತ್ತು ಆಚರಣೆ ಮಾಡಬಹುದು. ಆದರೆ, ಇತರರ ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡುವ ಹಕ್ಕು ಯಾರಿಗೂ ಇಲ್ಲ. ಕೆಲವು ಘಟನೆಗಳು ದೇಶದ ಬಹುತ್ವ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳ ಬದ್ಧತೆಯನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

ನಾವು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ಹೇಳಿದರು ಮತ್ತು ಪ್ರತಿಯೊಬ್ಬರೂ ತಮ್ಮ ದೇಶ, ಭಾಷೆ ಮತ್ತು ಧರ್ಮದ ಬಗ್ಗೆ ಹೆಮ್ಮೆ ಪಡಬೇಕು. ಪಾಶ್ಚಿಮಾತ್ಯ ಮಾಧ್ಯಮಗಳು ಭಾರತದ ಸಾಧನೆಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ನಕಾರಾತ್ಮಕ ಕಥೆಗಳನ್ನು ಹೇಳುವ ಅಭ್ಯಾಸವನ್ನು ಹೊಂದಿವೆ ಎಂದು ಅವರು ಹೇಳಿದರು.

ದೇಶದಲ್ಲಿ ಬಡತನ, ಲಿಂಗ ಅಸಮಾನತೆ ಮತ್ತು ಸಾಮಾಜಿಕ ಅಸಮಾನತೆಯಂತಹ ಹಲವಾರು ಸಮಸ್ಯೆಗಳಿವೆ ಎಂದು ವೆಂಕಯ್ಯನಾಯ್ಡು ಒಪ್ಪಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...