Friday, August 14, 2026
Friday, August 14, 2026

ಎಸಿಬಿಗೆ ಕಳಂಕಿತರನ್ನ ನೇಮಕ ಮಾಡದಿರಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ

Date:

ಭ್ರಷ್ಟಾಚಾರ ನಿರ್ಮೂಲನೆಗಾಗಿ ರಚಿಸಲಾಗಿರುವ ಭ್ರಷ್ಟಾಚಾರ ನಿಗ್ರಹ ದಳದಂತಹ (ಎಸಿಬಿ) ಸಂಸ್ಥೆಗಳಿಗೆ ಕಳಂಕಿತ ಅಧಿಕಾರಿಗಳನ್ನು ನೇಮಕ ಮಾಡಬಾರದು ಎಂದು ಹೈಕೋರ್ಟ್, ಸರ್ಕಾರಕ್ಕೆ ಖಡಕ್ ಆದೇಶ ನೀಡಿದೆ.

ಎಸಿಬಿಗೆ ಅಧಿಕಾರಿಗಳನ್ನು ನೇಮಕ ಮಾಡುವಾಗ ಅವರ ಸೇವಾ ದಾಖಲೆ (ಸವೀರ್ಸ್ ರೆಕಾರ್ಡ್‌) ಹಾಗೂ ಅಧಿಕಾರಿಗಳ ದಕ್ಷತೆಯನ್ನು ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ನ್ಯಾ.
ಎಸ್. ಸಂದೇಶ್ ಅವರು ಎಸಿಬಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿ ಲಂಚ ಪ್ರಕರಣದಲ್ಲಿ ಎಸಿಬಿ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿರುವ ನ್ಯಾಯಮೂರ್ತಿಗಳು ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಎಸಿಬಿಗೆ ಕಳಂಕಿತರನ್ನು ನೇಮಿಸಬೇಡಿ ಎಂದು ಸರ್ಕಾರಕ್ಕೆ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಉಪ ತಹಸೀಲ್ದಾರ್‌ ಪಿ.ಎಸ್‌. ಮಹೇಶ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಅವರಿದ್ದ ಪೀಠ ಈ ಕುರಿತು ಆದೇಶ ಹೊರಡಿಸಿ, ಅದನ್ನು ಸರ್ಕಾರಕ್ಕೆ ತಲುಪಿಸಲು ರಿಜಿಸ್ಟ್ರಾರ್ ಜನರಲ್‌ಗೆ ಆದೇಶ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...