ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಇಂದು ಸಹ ಮುಂದುವರಿಯಲಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ.ಇನ್ನು ಬಿತ್ತನೆ ಮಾಡಿರುವ ರೈತರು ಹೀಗೆ ಮಳೆ ಮುಂದುವರಿದರೆ, ಮುಂದೆ ಬೆಳೆಗಳು ರೋಗಕ್ಕೆ ತುತ್ತಾಗುವ ಆತಂಕದಲ್ಲಿದ್ದಾರೆ.
ಮತ್ತೊಂದು ಕಡೆ ಬಿತ್ತನೆ ಮಾಡಬೇಕಿರುವ ರೈತರು ಮಳೆ ನಿಂತ್ರೆ ಸಾಕು ಎಂದು ಹೇಳುತ್ತಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜಲಾಶಯಗಳು ಭರ್ತಿಯಾಗಿವೆ. ಜಲಾಶಯಗಳಿಂದ ನದಿಗೆ ಸಾವಿರಾರು ಕ್ಯೂಸೆಕ್ ಪ್ರಮಾಣದಲ್ಲಿ ನೀರು ಹರಿಬಿಡಲಾಗ್ತಿದೆ. ಆದ್ದರಿಂದ ನದಿ ತೀರದ ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ 19 ಮತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಹಲವೆಡೆ ಮಳೆಯಾಗುತ್ತಿದೆ.