Monday, March 23, 2026
Monday, March 23, 2026

ನೂತನ ಸಂಸತ್ ಭವನದ ಅಶೋಕ ಚಕ್ರ ಲಾಂಛನ: ಶಿಲ್ಪಿಯ ಸ್ಪಷ್ಟನೆ

Date:

ನವದೆಹಲಿಯಲ್ಲಿ ನಿರ್ಮಿಸಲಾಗಿರುವ ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದ್ದಾರೆ.

ಲಾಂಛನದಲ್ಲಿರುವ ಸಿಂಹಗಳ ಮುಖಭಾವದ ಕುರಿತು ಪ್ರತಿಪಕ್ಷಗಳ ನಾಯಕರು ತಕರಾರು ತೆಗೆದಿದ್ದಾರೆ.
ಸಿಂಹಗಳ ಮುಖಭಾವದಲ್ಲಿ ಅತಿಯಾದ ವ್ಯಗ್ರತೆ ಇದೆ ಎಂಬುದು ಪ್ರತಿಪಕ್ಷಗಳ ನಾಯಕರ ಆರೋಪವಾಗಿದೆ.

ಅಲ್ಲದೆ ರಾಷ್ಟ್ರೀಯ ಲಾಂಛನ ಅನಾವರಣಗೊಳಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳನ್ನು ಆಹ್ವಾನಿಸಿಲ್ಲ ಎಂಬ ಆಕ್ಷೇಪವೂ ಕೇಳಿ ಬಂದಿದೆ.

ಇದರ ನಡುವೆ ಲಾಂಛನ ನಿರ್ಮಿಸಿರುವ 49 ವರ್ಷದ ಶಿಲ್ಪಿ ಸುನಿಲ್ ಡಿಯೋರಾ ಈಗ ವಿವಾದದ ಕುರಿತು ಸ್ಪಷ್ಟನೆ ನೀಡಿದ್ದು, ಅಲ್ಲಿರುವ ಸಿಂಹಗಳ ಗಾತ್ರಕ್ಕೂ ನೂತನ ಸಂಸತ್ ಭವನದ ಮೇಲಿನ ಬೃಹತ್ ಲಾಂಛನದ ಸಿಂಹಗಳ ಗಾತ್ರಕ್ಕೂ ಭಾರಿ ವ್ಯತ್ಯಾಸವಿದ್ದು, ಆದರೂ ಕೂಡ ಸಿಂಹಗಳ ಮುಖಭಾವದಲ್ಲಿ ಸಾಮ್ಯತೆ ಕಾಪಾಡಿಕೊಳ್ಳಲಾಗಿದೆ.

ತದ್ರೂಪು ಬರುವಂತೆ ನೋಡಿಕೊಳ್ಳಲಾಗಿದ್ದು, ಮನಬಂದಂತೆ ಯಾವುದೇ ಮಾರ್ಪಾಡು ಮಾಡಿಲ್ಲ ಎಂದು ಹೇಳಿದ್ದಾರೆ.

ಸಂಸತ್ ಮೇಲೆ ನಿರ್ಮಾಣವಾಗಿರುವ ಲಾಂಛನದಲ್ಲಿನ ಸಿಂಹಗಳು ವಾರಣಾಸಿ ಬಳಿಯ ಸಾರಾನಾಥದಲ್ಲಿರುವ ಅಶೋಕ ಸ್ಥಂಭದ ಮೇಲಿನ ಸಿಂಹಗಳನ್ನೇ ಹೋಲುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...