Friday, August 14, 2026
Friday, August 14, 2026

ಭದ್ರಾ ಜಲಾಶಯ ಭರ್ತಿ ಜನತೆಗೆ ಮುನ್ನೆಚ್ಚರಿಕೆ

Date:

ರಾಜ್ಯದ ನಾಲ್ಕನೇ ಅತಿದೊಡ್ಡ ಜಲಾಶಯ ಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 12 ಗಂಟೆಗೆ ಕ್ರಸ್ಟ್ ಗೇಟ್ ಗಳನ್ನು ತೆರೆದು ನದಿಗೆ ಹೆಚ್ಚುವರಿ ನೀರು ಹರಿಸಲಾಗುತ್ತದೆ.

ಜಲಾಶಯದ ಇತಿಹಾಸದಲ್ಲೇ ಮೊದಲ ಬಾರಿಗೆ ಜು.15ರೊಳಗೆ ಭರ್ತಿ ಆಗಿರುವುದು ಅಚ್ಚುಕಟ್ಟು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಭದ್ರಾವತಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳ ಜೀವನಾಡಿ ಆಗಿರುವ ಭದ್ರಾ ಜಲಾಶಯ ನಿರೀಕ್ಷೆ ಮೀರಿ ಅವಧಿಗೆ ಮುನ್ನವೇ ಭರ್ತಿಯಾಗಿದೆ.

186 ಅಡಿ ಪೂರ್ಣಮಟ್ಟದ ಡ್ಯಾಮ್ ನಲ್ಲಿ ಈಗ ನೀರಿನ ಮಟ್ಟ 183.50 ಅಡಿಗೆ ತಲುಪಿದೆ. ಒಳ ಹರಿವು 43 ಸಾವಿರ ಕ್ಯೂಸೆಕ್ ಇರುವುದರಿಂದ ಭರ್ತಿಗೆ ಇನ್ನೂ ಎರಡೂವರೆ ಅಡಿ ಬಾಕಿ ಇರುವಂತೆ ಗೇಟ್ ಗಳನ್ನು ತರೆದು ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ತಗ್ಗು ಪ್ರದೇಶಗಳಲ್ಲಿನ ಜನ ಮತ್ತು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕೆಂದು ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...