Thursday, February 5, 2026
Thursday, February 5, 2026

ಭದ್ರಾ ಜಲಾಶಯ ಭರ್ತಿ ಜನತೆಗೆ ಮುನ್ನೆಚ್ಚರಿಕೆ

Date:

ರಾಜ್ಯದ ನಾಲ್ಕನೇ ಅತಿದೊಡ್ಡ ಜಲಾಶಯ ಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 12 ಗಂಟೆಗೆ ಕ್ರಸ್ಟ್ ಗೇಟ್ ಗಳನ್ನು ತೆರೆದು ನದಿಗೆ ಹೆಚ್ಚುವರಿ ನೀರು ಹರಿಸಲಾಗುತ್ತದೆ.

ಜಲಾಶಯದ ಇತಿಹಾಸದಲ್ಲೇ ಮೊದಲ ಬಾರಿಗೆ ಜು.15ರೊಳಗೆ ಭರ್ತಿ ಆಗಿರುವುದು ಅಚ್ಚುಕಟ್ಟು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಭದ್ರಾವತಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳ ಜೀವನಾಡಿ ಆಗಿರುವ ಭದ್ರಾ ಜಲಾಶಯ ನಿರೀಕ್ಷೆ ಮೀರಿ ಅವಧಿಗೆ ಮುನ್ನವೇ ಭರ್ತಿಯಾಗಿದೆ.

186 ಅಡಿ ಪೂರ್ಣಮಟ್ಟದ ಡ್ಯಾಮ್ ನಲ್ಲಿ ಈಗ ನೀರಿನ ಮಟ್ಟ 183.50 ಅಡಿಗೆ ತಲುಪಿದೆ. ಒಳ ಹರಿವು 43 ಸಾವಿರ ಕ್ಯೂಸೆಕ್ ಇರುವುದರಿಂದ ಭರ್ತಿಗೆ ಇನ್ನೂ ಎರಡೂವರೆ ಅಡಿ ಬಾಕಿ ಇರುವಂತೆ ಗೇಟ್ ಗಳನ್ನು ತರೆದು ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ತಗ್ಗು ಪ್ರದೇಶಗಳಲ್ಲಿನ ಜನ ಮತ್ತು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕೆಂದು ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...