Thursday, August 13, 2026
Thursday, August 13, 2026

ಹಂಪಿ ತಾಣಕ್ಕೆ ಧಕ್ಕೆಯಾಗದಂತೆ ಪ್ರವಾಸಿಗರಿಗೆ ಸೌಲಭ್ಯ-ಆನಂದ್ ಸಿಂಗ್

Date:

ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಮಹಾಯೋಜನೆ(ಮಾಸ್ಟರ್ ಪ್ಲಾನ್)ಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಆನಂದಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಸಭೆ ಜರುಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಆನಂದಸಿಂಗ್ ಅವರು ಈಗ ಸಿದ್ದಪಡಿಸಲಾಗಿರುವ ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಮಹಾಯೋಜನೆ(ಮಾಸ್ಟರ್ ಪ್ಲಾನ್)ಅಡಿ ಹಂಪಿಯ ಸಾಂಸ್ಕೃತಿಕ ಪರಂಪರೆಗೆ ಧಕ್ಕೆಯಾಗದ ರೀತಿಯಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಶ್ವಪರಂಪರೆ ಪ್ರದೇಶದ ಸಂರಕ್ಷಣೆ,ನಿರ್ವಹಣೆ ಹಾಗೂ ಅಭಿವೃದ್ಧಿಯ ಹಿನ್ನೆಲೆಯಲ್ಲಿ ದೆಶದಲ್ಲಿಯೇಮೊಟ್ಟ ಮೊದಲ ಬಾರಿಗೆ ರಚಿತವಾದ ವೈಶಿಷ್ಟ್ಯವಾದ ಪ್ರಾಧಿಕಾರ ಹವಾಮಾ ಆಗಿದೆ ಎಂದು ಬಣ್ಣಿಸಿದ ಸಚಿವ ಸಿಂಗ್ ಅವರು ಹವಾಮಾ ವ್ಯಾಪ್ತಿಯಡಿ ಪ್ರತಿ ಕಂದಾಯ ಗ್ರಾಮಗಳಿಗೆ 10 ಹೋಂಸ್ಟೇಗೆ ಅನುಮತಿ ಸೇರಿದಂತೆ ಇನ್ನೀತರ ಅಂಗಳು ಹವಾಮಾ ಮಹಾಯೋಜನೆಯ ಕರಡುವಿನಲ್ಲಿದೆ;ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು,27ರವರೆಗೆ ಸಲ್ಲಿಕೆಗೆ ಅವಕಾಶವಿದೆ ಎಂದರು.

ಮಹಾಯೋಜನೆಯ ಕರಡುವಿಗೆ ಸಂಬಂಧಿಸಿದಂತೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಶೀಘ್ರ ಸರಕಾರಕ್ಕೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಕೊಪ್ಪಳ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಸೂಚನೆ ನೀಡಿದರು.
ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಅವರು ಮಹಾಯೋಜನೆಯ ಕರಡುವಿನಲ್ಲಿರುವ ಕೆಲ ಅಂಶಗಳ ಕುರಿತು ಆಕ್ಷೇಪಣೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರಿಗೆ ಇದೇ ಸಂದರ್ಭದಲ್ಲಿ ಸಲ್ಲಿಸಿದರು.

ಹವಾಮಾ ಆಯುಕ್ತ ಸಿದ್ದರಾಮೇಶ್ವರ ಅವರು ಮಾತನಾಡಿ ಹಮಾವಾ ಅಡಿ 41.80 ಚ.ಕಿ.ಮೀ ಕೋರ್ ಝೋನ್ ಮತ್ತು ಬಫರ್ ಮತ್ತು ಫೆರಿಫೆರಲ್ ಝೋನ್ 191.65 ಚ.ಕಿ.ಮೀ ಸೇರಿದಂತೆ ಒಟ್ಟು 236.45ಚ.ಕಿ.ಮೀ ವಿಸ್ತೀರ್ಣವಿದೆ. ವಿಜಯನಗರ ಜಿಲ್ಲೆಯ 14 ಗ್ರಾಮಗಳು ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ 15 ಗ್ರಾಮಗಳು ಇದರ ವ್ಯಾಪ್ತಿಗೆ ಸೇರುತ್ತವೆ ಎಂದು ಅವರು ವಿವರಿಸಿದರು.

ಕೊಪ್ಪಳ ಜಿಲ್ಲೆಯ 15 ಗ್ರಾಮಗಳು ಮತ್ತು ವಿಜಯನಗರ ಜಿಲ್ಲೆಯ 14 ಗ್ರಾಮಗಳಲ್ಲಿ ನಡೆಸುತ್ತಿದ್ದ ಅನಧಿಕೃತ ರೆಸಾರ್ಟ್‍ಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗಂಗಾವತಿ ಶಾಸಕ ಪರಣ್ಣ ಮನವಳ್ಳಿ,ನಗರಸಭೆ ಅಧ್ಯಕ್ಷೆ ಸುಂಕಮ್ಮ, ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಕೊಪ್ಪಳ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್, ವಿಜಯನಗರ ಎಸ್.ಪಿ ಡಾ.ಅರುಣ್ ಕೆ, ಕೊಪ್ಪಳ ಎಸ್.ಪಿ ಅರುಣಾಂಗ್ಷು ಗಿರಿ, ವಿಜಯನಗರ ಜಿ.ಪಂ. ಸಿಇಒ ಹರ್ಷಲ್ ಬೋಯೇರ್ ನಾರಾಯಣರಾವ್ ಮತ್ತಿತರರು ಇದ್ದರು.

ನಂತರ ಹೊಸಪೇಟೆಗೆ 24*7 ನಿರಂತರ ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಸಚಿವ ಆನಂದಸಿಂಗ್ ಅವರು ನಡೆಸಿದರು.

ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಹಿರಿಯ ಐಎಎಸ್ ಅಧಿಕಾರಿಗಳಾದ ಮೋಹನ್ ರಾಜ್, ದೀಪಾ ಚೋಳನ್,ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...