Wednesday, December 10, 2025
Wednesday, December 10, 2025

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಉಪ ರಾಷ್ಟ್ರಪತಿ ಹುದ್ದೆ ಅಭ್ಯರ್ಥಿ ಬಗ್ಗೆ ಚರ್ಚೆ

Date:

ಎನ್‌ಡಿಎ ಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಜುಲೈ 16 ಬಿಜೆಪಿ ಸಂಸದೀಯ ಮಂಡಳಿ ಸಭೆ ಕರೆಯಲಾಗಿದೆ. ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

ಈಗಾಗಲೇ ಹಲವು ಹೆಸರುಗಳು ಮುನ್ನಲೆಗೆ ಬಂದಿದ್ದು, ಮಹತ್ವದ ಚರ್ಚೆ ಬಳಿಕ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಹೆಸರು ಘೋಷಿಸುವ ಸಾಧ್ಯತೆ ಇದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ನಾಮ ಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದೆ. ಆದ್ದರಿಂದ, ಇಂದೇ ಉಪ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಂತಿಮಗೊಳ್ಳಲಿದೆ. ಸದ್ಯ ಉಪರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅಧಿಕಾರವದಿ ಆಗಸ್ಟ್ 10ಕ್ಕೆ ಅಂತ್ಯಗೊಳ್ಳಲಿದೆ. ಆಗಸ್ಟ್ 11 ರಂದು ನೂತನ ಉಪ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಡೆ ವಿಪಕ್ಷಗಳು ಕೂಡ ಶೀಘ್ರದಲ್ಲೇ ಉಪ ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಘೋಷಿಸಲಿದೆ.

ಚುನಾವಣಾ ಆಯೋಗ ಜೂನ್ 29ಕ್ಕೆ ಉಪರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಿಸಿದೆ. ಇದರ ಬೆನ್ನಲ್ಲೇ ಎನ್‌ಡಿಎ, ಯುಪಿಎ ಕೂಟದಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿದೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಸಮುದಾಯದ ನಾಯಕಿ ದ್ರೌಪದಿ ಮರ್ಮು ಹೆಸರನ್ನು ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದ್ರೌಪದಿ ಮುರ್ಮು ವಿರುದ್ಧ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...