Thursday, June 25, 2026
Thursday, June 25, 2026

ನ.5ಕ್ಕೆ ಪ್ರಧಾನಿ ಕೇದಾರನಾಥ್ ಭೇಟಿ

Date:

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 5ರಂದು ಕೇದಾರನಾಥಕ್ಕೆ ಭೇಟಿ ನೀಡುವರು. ಅಲ್ಲಿ ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿದ್ದಾರೆ.
ಅದರೊಂದಿಗೆ ಶ್ರೀ ಆದಿಶಂಕರಾಚಾರ್ಯ ಪ್ರತಿಮೆಯನ್ನು ಸಹ ಅನಾವರಣ ಮಾಡಲಿರುವ ಪ್ರಧಾನಿ,ಅನೇಕ ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
2013ರ ಪ್ರವಾಹದಲ್ಲಿ ಹಾನಿಗೊಳಗಾಗಿದ್ದ ಸಮಾಧಿಯನ್ನು ಮರುನಿರ್ಮಾಣ ಮಾಡಲಾಗಿದೆ. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಮೇಲ್ವಿಚಾರಣೆ ನಡೆಸುತ್ತಿರುವ ಪ್ರಧಾನಿಯವರ ಮಾರ್ಗದರ್ಶನದಲ್ಲಿ ಸಂಪೂರ್ಣ ಪುನರ್ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದೆ. ಸರಸ್ವತಿ ಅಷ್ಟಪಥ್ ನಲ್ಲಿ ಪೂರ್ಣಗೊಂಡ ಮತ್ತು ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳನ್ನು ಪ್ರಧಾನಮಂತ್ರಿಯವರು ಪರಿಶೀಲಿಸಲಿದ್ದಾರೆ.
ಪ್ರಧಾನಮಂತ್ರಿಯವರು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಷ್ಟಪಥದ ಸರಸ್ವತಿ ರಿಟೇರಿಂಗ್ ವಾಲ್ ಮತ್ತು ಘಾಟ್ ಗಳು, ತೀರ್ಥ ಪುರೋಹಿತ್ ಮನೆಗಳು ಹಾಗೂ ಮಂದಾಕಿನಿ ನದಿಯ ಶೆಟ್ಟಿ ಸೇತುವೆ ಸೇರಿದಂತೆ ಪೂರ್ಣಗೊಂಡ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ.
ಸುಮಾರು 130 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಯೋಜನೆ ಗಳನ್ನು ಪೂರ್ಣಗೊಳಿಸಲಾಗಿದೆ. ಸಂಗಮ್ ಘಾಟ್, ಪ್ರಥಮ ಚಿಕಿತ್ಸೆ ಮತ್ತು ಪ್ರವಾಸಿ ಸೌಲಭ್ಯ ಕೇಂದ್ರ, ಆಡಳಿತ ಕಚೇರಿ ಮತ್ತು ಆಸ್ಪತ್ರೆ, ಎರಡು ಅತಿಥಿ ಗೃಹಗಳು, ಪೊಲೀಸ್ ಠಾಣೆ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಂದಾಕಿನಿ ಅಷ್ಟಪಥ ಕ್ಯೂ ನಿರ್ವಹಣೆ ಮತ್ತು ಮಳೆ ಆಶ್ರಯ ಕೇಂದ್ರ, ಹಾಗೂ ಸರಸ್ವತಿ ನಾಗರಿಕ ಸೌಲಭ್ಯ ಕಟ್ಟಡ ಸೇರಿದಂತೆ 180 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...