Tuesday, July 29, 2025
Tuesday, July 29, 2025

ಕೃಷಿ ವಲಯಕ್ಕೆ ಪೂರಕವಾಗಿ ₹ 23 ಸಾವಿರ ಕೋಟಿ ಮೌಲ್ಯದ ಯೋಜನೆ ಪ್ರಸ್ತಾವನೆ ಸ್ವೀಕೃತ

Date:

ಕೃಷಿ ವಲಯಕ್ಕೆ ಪೂರಕವಾದ ವಿನೂತನ ಯೋಜನೆಗಳಿಗೆ ಹಣಕಾಸು ಸೌಲಭ್ಯ ಒದಗಿಸುವ ಕೇಂದ್ರದ ಕೃಷಿ ಮೂಲಸೌಕರ್ಯ ನಿಧಿ’ ಅಡಿ ಕಳೆದ ಮೂರು ವರ್ಷಗಳಲ್ಲಿ ದೇಶಾದ್ಯಂತ ಒಟ್ಟಾರೆ 23 ಸಾವಿರ ಕೋಟಿ ಮೊತ್ತದ ವಿವಿಧ ಪ್ರಕಾರದ ಪ್ರಸ್ತಾವನೆಗಳು ಸ್ವೀಕರಿಸಲಾಗಿದ್ದು, ಈ ಪೈಕಿ 13 ಸಾವಿರ ಕೋಟಿ ಮೊತ್ತದ ಯೋಜನೆಗಳು ಪರಿಗಣನೆ ಹಂತದಲ್ಲಿವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ತಿಳಿಸಿದರು.

ಶೈತ್ಯಾಗಾರ, ಗೋದಾಮುಗಳು ಸೇರಿದಂತೆ ಕೊಯ್ಲೋತ್ತರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2020ರಲ್ಲಿ ಈ ಕೃಷಿ ಮೂಲಸೌಕರ್ಯ ನಿಧಿ ಸ್ಥಾಪಿಸಿದೆ.

ಇದರಡಿ ಬ್ಯಾಂಕ್‌ಗಳ ಮೂಲಕ ಒಂದು ಲಕ್ಷ ಕೋಟಿ ರೂ.ವರೆಗೂ ಹಣಕಾಸು ನೆರವು ನೀಡಲು ಅವಕಾಶ ಇದೆ. ಇದರಲ್ಲಿ ಈವರೆಗೆ 23 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಇದರಲ್ಲಿ 13 ಸಾವಿರ ಕೋಟಿ ಮೊತ್ತದ ಯೋಜನೆಗಳು ಅನುಮೋದನೆಯ ಹಲವು ಹಂತಗಳಲ್ಲಿದ್ದು, ಈ ಪೈಕಿ ಒಂಬತ್ತು ಸಾವಿರ ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಬ್ಯಾಂಕ್‌ಗಳ ಮೂಲಕ ಹಣ ಬಿಡುಗಡೆ ಆಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದವರಾರೂ ದೊಡ್ಡ ಕಂಪೆನಿಗಳ ಮಾಲಿಕರಲ್ಲ. ರೈತರು, ರೈತ ಉತ್ಪಾದಕ ಸಂಘಗಳಾಗಿವೆ. ವಿನೂತನ ಯೋಜನೆಗಳಿಗೆ ಈ ನಿಧಿ ಅಡಿ ವೇದಿಕೆ ಕಲ್ಪಿಸಲಾಗುತ್ತದೆ. ಬ್ಯಾಂಕ್‌ಗಳ ಮೂಲಕ ಕನಿಷ್ಠ ಬಡ್ಡಿದರ (ಶೇ. 3)ದಲ್ಲಿ ಸಾಲಸೌಲಭ್ಯ ಕಲ್ಪಿಸಲಾಗುತ್ತದೆ. ಯೋಜನೆ ಅವಧಿ 2025-26ರವರೆಗೆ ಇರಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Red Cross ಪ್ರತಿಯೊಬ್ಬರೂ ರಕ್ತದಾನ ಮಾಡಿ ಜೀವವುಳಿಸಿ- ಡಿ.ಕಿಶೋರ್ ಕುಮಾರ್

Red Cross ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮೂಲಕ ಇನ್ನೊಂದು ಜೀವ ಉಳಿಸಲು...

Santosh Lad ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ

Santosh Lad ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಂದು ಬೆಳಗಾವಿಯ...

Missing Case ಶಿವಮೊಗ್ಗದಿಂದ ಮಹಿಳೆ ನಾಪತ್ತೆ.ಸುಳಿವು ಸಿಕ್ಕವರು ಮಾಹಿತಿ ನೀಡಲು ಕೋಟೆ ಪೊಲೀಸ್ ಪ್ರಕಟಣೆ.

Missing Case ಖಿನ್ನತೆಯಿಂದ ಬಳಲುತ್ತಿದ್ದ ಸುಮಾರು 75 ವರ್ಷದ ನಿಂಗಮ್ಮ ಎಂಬುವವರು...

Shivamogga Rangayana ರಂಗಾಯಣಕ್ಕೆ ತಂತ್ರಜ್ಞರು & ಕಲಾವಿದರಿಂದ ಅರ್ಜಿ ಆಹ್ವಾನ

Shivamogga Rangayana ಶಿವಮೊಗ್ಗ ರಂಗಾಯಣದ ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ...