Wednesday, March 18, 2026
Wednesday, March 18, 2026

ಮುರ್ಮು ಅವರಿಗೆ ಬೆಂಬಲ ಪ್ರಜಾಸತ್ತೆಯ ಹೆಗ್ಗಳಿಕೆ-ಎಚ್ ಡಿಕೆ

Date:

ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡಲು ಜೆಡಿಎಸ್ ನಿರ್ಧರಿಸಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಜನತಾ ದಳ ಪಕ್ಷ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕೊರೋನಾ ಪಾಸಿಟಿವ್‌ ಕಾರಣಕ್ಕೆ ನಾನು ವರ್ಚುಯಲ್‌ ವೇದಿಕೆ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಚ್​ಡಿ ದೇವೇಗೌಡರು ಪ್ರಧಾನಿಗಳಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯ ಕೈಗೊಂಡಿದ್ದರು. ಪ್ರಪ್ರಥಮ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವುದು ಹೆಮ್ಮೆಯ ಸಂಗತಿ. ಇದು ಮಾಜಿ ಪ್ರಧಾನಮಂತ್ರಿಗಳ ಆಶಯವೂ ಹೌದು. ಎಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ತಮ್ಮ ಉಮೇದುವಾರಿಕೆ ಘೋಷಣೆಯಾದ ಮರುದಿನವೇ ದ್ರೌಪದಿ ಮುರ್ಮು ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದರು.

ಬೆಂಗಳೂರಿಗೆ ಭೇಟಿ ನೀಡಿದ್ದಾಗ ಸ್ವತಃ ಅವರೇ ಗೌಡರ ನಿವಾಸಕ್ಕೆ ಭೇಟಿ ನೀಡಿ ಮತ ಕೇಳಿದ್ದರು ಎಂದು ತಿಳಿಸಿದರು.

ದ್ರೌಪದಿ ಮುರ್ಮು ಅವರ ವ್ಯಕ್ತಿತ್ವ, ಅವರ ಹಿನ್ನೆಲೆ ಹಾಗೂ ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ನಮ್ಮ ಪಕ್ಷ ಬೆಂಬಲ ಘೋಷಿಸಿದೆ. ಇಲ್ಲಿ ಪಕ್ಷಗಳ ಪ್ರಮೇಯವೇ ಇಲ್ಲ. ರಾಷ್ಟ್ರದ ಪರಮೋಚ್ಛ ಸಾಂವಿಧಾನಿಕ ಸ್ಥಾನ ರಾಷ್ಟ್ರಪತಿ ಪದವಿ. ಅದು ಪಕ್ಷ ರಾಜಕಾರಣದ ಚೌಕಟ್ಟನ್ನು ಮೀರಿದ ಹೊಣೆಗಾರಿಕೆ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಹೆಮ್ಮೆಯ 3 ಸೇನಾಪಡೆಗಳ ಮಹಾ ದಂಡನಾಯಕರಾಗಿ ಬುಡಕಟ್ಟು ಸಮುದಾಯದ ಓರ್ವ ಮಹಿಳೆಯೊಬ್ಬರು ಚುಕ್ಕಾಣಿ ಹಿಡಿಯುವುದು ಎಂದರೆ, ಅದು ಐತಿಹಾಸಿಕ ಗರಿಯೇ ಸರಿ. ಸಮಸ್ತ ಮಹಿಳೆಯರಿಗೆ ಮಾತ್ರವಲ್ಲ ಭಾರತ ಒಪ್ಪಿಕೊಂಡಿರುವ ಪ್ರಜಾಸತ್ತೆಯ ಹೆಗ್ಗಳಿಕೆಯೂ ಹೌದು ಎಂದು ಹೆಚ್​ಡಿಕೆ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ

Media Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ...

B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ...