Sunday, June 28, 2026
Sunday, June 28, 2026

ಖಾದಿ ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ

Date:

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 10 ಯುವ ವೃತ್ತಿಪರ ಭರ್ತಿಗೆ ಆಯೋಗ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 30 ಆಗಿದೆ.

ಈ ಹುದ್ದೆಗಳನ್ನು ಆಯೋಗ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಒಂದು ವರ್ಷದ ಒಪ್ಪಂದದ ಹುದ್ದೆ ಇದಾಗಿದೆ. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ, ಅರ್ಜಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ
ಯುವ ವೃತ್ತಿಪರರು :ಹುದ್ದೆಗಳ ಸಂಖ್ಯೆ10

ಕಾರ್ಯ ನಿರ್ವಹಣೆ ಸ್ಥಳ
ಕೇರಳ – ತಮಿಳುನಾಡು – ಕರ್ನಾಟಕ – ತೆಲಂಗಾಣ

ವೇತನ
25000-30000 ರೂ ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು27 ವರ್ಷಗಳಿಗಿಂತ ಕಡಿಮೆಯಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ದಾಖಲೆಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ

ಪ್ರಮುಖ ಕೌಶಲ್ಯ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಕಂಪ್ಯೂಟರ್​ ಜ್ಞಾನವನ್ನು ಹೊಂದಿರಬೇಕು.
ಉತ್ತಮ ಸಂವಹನ ಮತ್ತು ಬರವಣಿಗೆ ಕೌಶಲ್ಯವನ್ನು ಕೂಡ ಹೊಂದಿರಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಜುಲೈ 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2022
ಅಧಿಕೃತ ವೆಬ್‌ಸೈಟ್: kvic.gov.in

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Pulse Polio ಪೋಲಿಯೊ ಹನಿ:ಸುರಕ್ಷಿತ‌ ಉಚಿತ ಮತ್ತು ಪರಿಣಾಮಕಾರಿ.ನೆರೆದೇಶದ ವೈರಸ್ ನಿರೋಧಕ: ಡಾ.ರಘುನಂದನ್

Pulse Polio  " ಪೋಲಿಯೋ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಉಪ...

Pace college Students Bus Accident ಅಂಗಡಿಗೆ ನುಗ್ಗಿದ ಕಾಲೇಜು ಬಸ್.!ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ.

Pace college Students Bus Accident ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೆಡಿಕಟ್ಟೆಯಲ್ಲಿ...

D.K. Shivakumar ತೆರಿಗೆ ಸೋರಿಕೆಗೆ ಅವಕಾಶ ಇರಬಾರದು.ಯಾವುದೇ ರೀತಿ ರಾಜಿ,ನಿರ್ಲಕ್ಷ್ಯಕ್ಕೆ ಆಸ್ಪದವಿರಬಾರದು- ಡಿ.ಕೆ.ಶಿವಕುಮಾರ್.

D.K. Shivakumar ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ...

B.Y. Raghavendra “ಖೇಲೋ ಇಂಡಿಯಾ “ಒಳಾಂಗಣ ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಖೇಲೋ ಇಂಡಿಯಾ' ಯೋಜನೆಯಡಿ ₹5 ಕೋಟಿ...