Sunday, June 28, 2026
Sunday, June 28, 2026

ಭದ್ರಾ ಡ್ಯಾಂ ಸೇತುವೆ ಸುರಕ್ಷತೆ ಜರೂರಾಗಬೇಕಿದೆ

Date:

ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿದೆ. ಕಳೆದ ಹಲವು ದಿನಗಳಿಂದ ನೀರು ಹೊರ ಬಿಡಲಾಗುತ್ತಿದೆ. ಜಲರಾಶಿ ಸೊಬಗು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಸಿತ್ತಿದ್ದಾರೆ. ಆದರೆ ಡ್ಯಾಂ ನೀರಿನ ರಭಸಕ್ಕೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ತಡೆಗೋಡೆ ಕುಸಿದು ಬಿದ್ದಿದೆ.ದಿನದಿಂದ ದಿನಕ್ಕೆ ಭೂ ಕುಸಿತ ಹೆಚ್ಚಾಗುತ್ತಿದೆ. ಅಪಾಯಕಾರಿ ಸ್ಥಿತಿಯಲ್ಲಿದೆ. ಆದರೆ ಇಲ್ಲಿಯವರೆಗೂ ಸೂಕ್ತ ದುರಸ್ತಿ ಕಾಮಗಾರಿಯಾಗಲಿ, ಮುನ್ನೆಚ್ಚರಿಕೆ ಕ್ರಮವಾಗಲಿ ಕೈಗೊಂಡಿಲ್ಲ. ಪೊಲೀಸ್ ಇಲಾಖೆಯ ಬ್ಯಾರಿಕೇಡ್ ಕೂಡ ಕುಸಿದು ನದಿಗೆ ಬಿದ್ದಿದೆ ಎಂದು ಪ್ರವಾಸಿಗರು ದೂರಿದ್ದಾರೆ. ಡ್ಯಾಂನಿಂದ ನೀರು ಹೊರಬಿಟ್ಟಿರುವ ಕಾರಣದಿಂದ ಭಾರೀ ಸಂಖ್ಯೆಯ ಪ್ರವಾಸಿಗರು ಡ್ಯಾಂ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ತಡೆಗೋಡೆ ಕುಸಿತವಾಗಿರುವ ಸ್ಥಳದ ಬಳಿಯೇ ಓಡಾಡುತ್ತಿದ್ದಾರೆ. ಕೊಂಚ ಹೆಚ್ಚಾ ಕಮ್ಮಿಯಾದರೂ ನದಿಗೆ ನಾಗರೀಕರು ನದಿಗೆ ಬೀಳುವ ಸಾಧ್ಯತೆಯಿದೆ. ತಕ್ಷಣವೇ ಭದ್ರಾ ಜಲಾಶಯ ಆಡಳಿತ ದುರಸ್ತಿ ಕಾರ್ಯ ನಡೆಸಬೇಕು. ಜೊತೆಗೆ ಸ್ಥಳದಲ್ಲಿ ಪ್ರವಾಸಿಗರ ಸಂಚಾರ ನಿರ್ಬಂಧಿಸಿ, ಸೂಕ್ತ ಬ್ಯಾರಿಕೇಡ್ ಮುನ್ನೆಚ್ಚರಿಕೆ ಫಲಕ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ದಿಟ್ಟಕ್ರಮ : ಬಿ.ನಿಖಿಲ್

ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಣೆ,...

B.Y. Raghavendra ಶ್ರೀ ಕೆಂಪೇಗೌಡರು ದೂರದೃಷ್ಟಿಯಿಂದ ನಾಡನ್ನು‌ ಕಟ್ಟಿ ಮಾದರಿಯಾಗಿದ್ದಾರೆ : ಬಿ.ವೈ.ರಾಘವೇಂದ್ರ

B.Y. Raghavendra ನಾಡಪ್ರಭು ಶ್ರೀ ಕೆಂಪೇಗೌಡರು ಓರ್ವ ದಕ್ಷ ಆಡಳಿತಗಾರ, ಅಪ್ರತಿಮ...