Wednesday, March 18, 2026
Wednesday, March 18, 2026

ಭದ್ರಾ ಡ್ಯಾಂ ಸೇತುವೆ ಸುರಕ್ಷತೆ ಜರೂರಾಗಬೇಕಿದೆ

Date:

ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿದೆ. ಕಳೆದ ಹಲವು ದಿನಗಳಿಂದ ನೀರು ಹೊರ ಬಿಡಲಾಗುತ್ತಿದೆ. ಜಲರಾಶಿ ಸೊಬಗು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಸಿತ್ತಿದ್ದಾರೆ. ಆದರೆ ಡ್ಯಾಂ ನೀರಿನ ರಭಸಕ್ಕೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ತಡೆಗೋಡೆ ಕುಸಿದು ಬಿದ್ದಿದೆ.ದಿನದಿಂದ ದಿನಕ್ಕೆ ಭೂ ಕುಸಿತ ಹೆಚ್ಚಾಗುತ್ತಿದೆ. ಅಪಾಯಕಾರಿ ಸ್ಥಿತಿಯಲ್ಲಿದೆ. ಆದರೆ ಇಲ್ಲಿಯವರೆಗೂ ಸೂಕ್ತ ದುರಸ್ತಿ ಕಾಮಗಾರಿಯಾಗಲಿ, ಮುನ್ನೆಚ್ಚರಿಕೆ ಕ್ರಮವಾಗಲಿ ಕೈಗೊಂಡಿಲ್ಲ. ಪೊಲೀಸ್ ಇಲಾಖೆಯ ಬ್ಯಾರಿಕೇಡ್ ಕೂಡ ಕುಸಿದು ನದಿಗೆ ಬಿದ್ದಿದೆ ಎಂದು ಪ್ರವಾಸಿಗರು ದೂರಿದ್ದಾರೆ. ಡ್ಯಾಂನಿಂದ ನೀರು ಹೊರಬಿಟ್ಟಿರುವ ಕಾರಣದಿಂದ ಭಾರೀ ಸಂಖ್ಯೆಯ ಪ್ರವಾಸಿಗರು ಡ್ಯಾಂ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ತಡೆಗೋಡೆ ಕುಸಿತವಾಗಿರುವ ಸ್ಥಳದ ಬಳಿಯೇ ಓಡಾಡುತ್ತಿದ್ದಾರೆ. ಕೊಂಚ ಹೆಚ್ಚಾ ಕಮ್ಮಿಯಾದರೂ ನದಿಗೆ ನಾಗರೀಕರು ನದಿಗೆ ಬೀಳುವ ಸಾಧ್ಯತೆಯಿದೆ. ತಕ್ಷಣವೇ ಭದ್ರಾ ಜಲಾಶಯ ಆಡಳಿತ ದುರಸ್ತಿ ಕಾರ್ಯ ನಡೆಸಬೇಕು. ಜೊತೆಗೆ ಸ್ಥಳದಲ್ಲಿ ಪ್ರವಾಸಿಗರ ಸಂಚಾರ ನಿರ್ಬಂಧಿಸಿ, ಸೂಕ್ತ ಬ್ಯಾರಿಕೇಡ್ ಮುನ್ನೆಚ್ಚರಿಕೆ ಫಲಕ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ

Media Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ...

B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ...