Wednesday, May 6, 2026
Wednesday, May 6, 2026

ದ್ರವರೂಪಿ ನ್ಯಾನೋ ಯೂರಿಯ: ರೈತರಿಗೆ ವರದಾನ-ಶಿವರಾಜ್ ಕುಮಾರ್

Date:

ನ್ಯಾನೋ ಯೂರಿಯಾ (ದ್ರವ) ಭಾರತ ಸರ್ಕಾರದ ರಸಗೊಬ್ಬರ ನಿಯಂತ್ರಣ ಕಾಯ್ದೆ 1985” ರಲ್ಲಿ ಸೇರ್ಪಡೆಯಾಗಿರುವ ಪ್ರಪಂಚದಲ್ಲಿಯೇ ಮೊಟ್ಟ ಮೊದಲ ನ್ಯಾನೋ ಗೊಬ್ಬರವಾಗಿದ್ದು ರೈತರ ಪಾಲಿಗೆ ವರದಾನವಾಗಿದೆ.

ಇದನ್ನು ಬಹಳ ವರ್ಷಗಳ ಸಂಶೋಧನೆಯ ನಂತರ ಗುಜರಾತ್‍ನ ಕಲೋಲ್‍ನಲ್ಲಿರುವ ನ್ಯಾನೋ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರದಲ್ಲಿ ಅಭಿವೃದ್ದಿಪಡಿಸಲಾಗಿದೆ. ಇದು ಶೇ.4 ರಷ್ಟು ನ್ಯಾನೋ ಸಾರಜನಕ ಕಣಗಳನ್ನು ಹೊಂದಿದೆ. ಸುಮಾರು 50 ಕೆ.ಜಿ. ಬ್ಯಾಗ್‍ನ ರಸಗೊಬ್ಬರ ಬಳಕೆ ಮಾಡುವಷ್ಟು ಜಾಗದಲ್ಲಿ ಕೇವಲ 250 ಮಿ.ಲೀ.ನಷ್ಟು ನ್ಯಾನೋ ಯೂರಿಯಾ ಬಳಕೆ ಮಾಡಿದರೆ ಸಾಕು. ಇದರಿಂದ ರೈತರಿಗೆ ಸಾಗಣೆ ವೆಚ್ಚ ಉಳಿಯುತ್ತದೆ. ಉತ್ಪಾದನಾ ವೆಚ್ಚ ಕಡಿಮೆಯಾಗುವ ಕಾರಣ ರೈತರ ಹಣವು ಉಳಿಯುತ್ತದೆ.
ಭೂಮಿಗೆ ಬಳಸುವ ಯೂರಿಯಾ ರಸಗೊಬ್ಬರದಲ್ಲಿ ಬೆಳೆಗಳಿಗೆ ಶೇ.20 ರಿಂದ 25 ಮಾತ್ರವೇ ಲಭ್ಯವಾಗುತ್ತಿದ್ದು, ಉಳಿದ ಪ್ರಮಾಣವು ವಿವಿಧ ರೀತಿಯಲ್ಲಿ ಬೆಳೆಗಳಿಗೆ ದೊರೆಯದೇ ನಷ್ಟವಾಗುತ್ತದೆ. ಆದರೆ ನ್ಯಾನೋ ಯೂರಿಯಾ ಗೊಬ್ಬರವು ಚಿಕ್ಕ ಗಾತ್ರದ ಕಣಗಳನ್ನು ಹೊಂದಿದ್ದು, (20-50nm) ಗಿಡಕ್ಕೆ ಬೇಕಾಗಿರುವ ಸಾರಜನಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸಿ ಶೇ.80 ರಷ್ಟು ಗೊಬ್ಬರವನ್ನು ಉಪಯೋಗಿಸಲ್ಪಡುತ್ತದೆ.

ಇದರಿಂದ ಸಸ್ಯದ ಬೆಳವಣಿಗೆಗೆ ಸಹಕಾರಿಯಾಗಿರುತ್ತದೆ. ಇದು ಸಸ್ಯದೊಳಗಿನ ಸಾರಜನಕ ಮತ್ತು ಇತರೆ ಪೋಷಕಾಂಶಗಳನ್ನು ತೆಗೆದುಕೊಳ್ಳುವ ಮತ್ತು ಸಂಯೋಜಿಸುವ ಮಾರ್ಗಗಳನ್ನು ಪ್ರಚೋದಿಸಿ ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಿ, ಕಟಾವು ಮಾಡಿದ ಬೆಳೆಗಳಲ್ಲಿ ಪೋಷಕಾಂಶಗಳ ಪ್ರಮಾಣವನ್ನು ಹೆಚ್ಚಿಸುತ್ತದೆ. ನ್ಯಾನೋ ಯೂರಿಯಾ ಬಳಕೆಯಿಂದ ಯೂರಿಯಾ ಬಳಕೆಯನ್ನು ಶೇ.50 ರಷ್ಟು ಕಡಿಮೆ ಮಾಡಿ ಬೆಳೆ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವ ಮೂಲಕ ರೈತರ ಆದಾಯ ಹೆಚ್ಚಿಸುತ್ತದೆ. ಇದು ಮಣ್ಣು, ಗಾಳಿ ಮತ್ತು ನೀರಿನ ಗುಣಮಟ್ಟವನ್ನು ಕಾಪಾಡುವಲ್ಲಿ ಸಹಕರಿಸುತ್ತದೆ.

ನ್ಯಾನೋ ಯೂರಿಯಾವನ್ನು ಬಳಸುವ ವಿಧಾನ: ರೈತರು ತಮ್ಮ ಬೆಳೆಗೆ ಕೊಡುವ ಮೂಲ ಗೊಬ್ಬರ ಅಥವಾ ತಳಗೊಬ್ಬರದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಮೇಲು ಗೊಬ್ಬರವಾಗಿ 2 ರಿಂದ 4 ಮಿ.ಲೀ. ನ್ಯಾನೋ ಯೂರಿಯಾವನ್ನು 1 ಲೀ. ನೀರಿನಲ್ಲಿ ಮಿಶ್ರಣ ಮಾಡಿ ಬೆಳೆಯ ಎಲೆಗಳ ಮೇಲೆ ಸಿಂಪಡಿಸಬೇಕು. ಉತ್ತಮ ಫಲಿತಾಂಶಕ್ಕಾಗಿ 20 ರಿಂದ 25 ದಿನಗಳ ಅಂತರದಲ್ಲಿ 2 ಬಾರಿ ಸಿಂಪಡಿಸಬೇಕು.

ಮೊಳಕೆ ಒಡೆದ 30 ರಿಂದ 35 ದಿನಗಳ ನಂತರ ಅಥವಾ ನಾಟಿ ಮಾಡಿದ 20 ರಿಂದ 25 ದಿನಗಳ ನಂತರ (ಸಕ್ರಿಯ ಬೆಳವಣಿಗೆ ಅಥವಾ ಕವಲೊಡೆಯುವ ಹಂತ) ಮೊದಲನೇ ಸಿಂಪಡಣೆ ಹಾಗೂ ಹೂ ಬರುವ ಮುಂಚಿತವಾಗಿ ಅಥವಾ 20 ರಿಂದ 25 ದಿನಗಳ ಅಂತರದಲ್ಲಿ ಎರಡನೇ ಸಿಂಪಡಣೆ ಮಾಡಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...