Wednesday, October 2, 2024
Wednesday, October 2, 2024

ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ದೇವಾಲಯ ಭೇಟಿ

Date:

ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ನಂತರ ಮೊದಲ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ಸಿನಿ ಶೆಟ್ಟಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ದೇವಸ್ಥಾನದ ವತಿಯಿಂದ ಅರ್ಚಕ ಶ್ರೀಧರ ತಂತ್ರಿ ಅವರ ಮೂಲಕವಾಗಿ ಪ್ರಸಾದ ನೀಡಿ ಗೌರವಿಸಲಾಯಿತು.

ಗೌರವವನ್ನು ಸ್ವೀಕರಿಸಿ ಮಾತನಾಡಿದ ಸಿನಿ ಶೆಟ್ಟಿ ಅವರು, ನಾನು ಮಾರಿಯಮ್ಮ ದೇವಿಯ ಭಕ್ತಿಯಾಗಿದ್ದು, ನಾನು ಚಿಕ್ಕವಯಸ್ಸಿನಿಂದಲೂ ನನ್ನ ತಂದೆ ತಾಯಿಯೊಂದಿಗೆ ಇಲ್ಲಿಗೆ ಬರುತ್ತಿದ್ದೆ. ಈಗ ಮಿಸ್ ಇಂಡಿಯಾ ಆಗಿ ಬರುತ್ತಿರುವುದಕ್ಕೆ ಮಾರಿಯಮ್ಮ ದೇವಿಯ ಅನುಗ್ರಹವೇ ಮುಖ್ಯ ಕಾರಣ. ಮುಂದೆ ಅಮ್ಮನ ಇದೇ ರೀತಿಯಲ್ಲಿ ಜಗದಗಲಕ್ಕೆ ಹರಡಿರುವ ಮಾರಿಯಮ್ಮ ದೇವಿಯ ಭಕ್ತರೆಲ್ಲರೂ ಶಿಲಾ ಸೇವೆ ನೀಡುವ ಮುಖಾಂತರ ಮಾರಿಗುಡಿಯ ಜೀರ್ಣೋದ್ಧಾರದಲ್ಲಿ ಕೈಜೋಡಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಪುಶ್ರೀ ಹೊಸ ಮಾರಿ ಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...