Tuesday, August 25, 2026
Tuesday, August 25, 2026

ರಾಜ್ಯದ ಶ್ರಮಿಕ ಫಲಾನುಭವಿಗಳಿಗೆ ಪಿಂಚಣಿ ಏರಿಕೆ

Date:

ರಾಜ್ಯ ಸರ್ಕಾರವು ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾನ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಧನ ಸಹಾಯದಲ್ಲಿ ಏರಿಕೆ ಮಾಡಿರುವುದರ ಜೊತೆಗೆ ನೋಂದಣಿ ವಂತಿಗೆ ರಿಯಾಯತಿ, ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ವಿತರಣೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಇನ್ನು ಫಲಾನುಭವಿಗಳ ನೋಂದಣಿ ವೇಳೆ ಮಂಡಳಿಗೆ ಪಾವತಿಸಬೇಕಿರುವ ವಂತಿಗೆ ಹಣ ಸಂಪೂರ್ಣ ಮನ್ನಾ ಮಾಡುವ ಶ್ರಮ ಸಾಮರ್ಥ್ಯ ಸೌಲಭ್ಯದಡಿ ಮಂಡಳಿಯ ಫಲಾನುಭವಿಗಳು ತರಬೇತಿ ಪಡೆಯದೆಯೇ ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ಪಡೆಯಲು ಗೃಹ ಭಾಗ್ಯ ಸೌಲಭ್ಯದಡಿ ಅರ್ಹಹ ಫಲಾನುಭವಿಗಳಿಗೆ ಮನೆ ಕಟ್ಟಲು ನೀಡುವ ಧನ ಸಹಾಯ 10 ಕಂತುಗಳಲ್ಲಿ ನೀಡಲು ಸರಳೀಕರಿಸಿ ತಿದ್ದುಪಡಿ ಮಾಡಲು ಒಪ್ಪಿಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...