Sunday, May 17, 2026
Sunday, May 17, 2026

ವಾಹನಗಳ ಮೇಲೆ ಬಿಬಿಎಂಪಿ ಬೋರ್ಡು ನಿಷೇಧಿಸಿ ಪಾಲಿಕೆ ಆದೇಶ

Date:

ವಾಹನಗಳ ಮೇಲೆ ಬಿಬಿಎಂಪಿ ಎಂದು ನಾಮಫಲಕ ಅಳವಡಿಸುವುದನ್ನು ನಿಷೇಧಿಸಿ, ಬಿಬಿಎಂಪಿ ಆದೇಶಿಸಿದೆ. ಈ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ನೌಕರರು ತಮ್ಮ ವಾಹನಗಳ ಮೇಲೆ ಅಳವಡಿಸುತ್ತಿದ್ದಂತ ನಾಮಫಲಕ ನಿಷೇಧಿಸಿ ಆದೇಶಿಸಿದೆ.

ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಘನತ್ಯಾಜ್ಯ ವಿಭಾಗ ಮತ್ತು ಯೋಜನಾ ವಿಭಾಗದ ವಿಶೇಷ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಹಾಗೂ ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು ಪಾಲಿಕೆಯ ಮೂಲಕ ಬಿಬಿಎಂಪಿ ಸೇವೆಯಲ್ಲಿ,ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂದು ನಮೂದಿಸಿಕೊಂಡು ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ ಎಂದಿದ್ದಾರೆ.

ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ ಮಾಡುವ ವಾಹನಗಳ‌ ಮೇಲೆ ಪಾಲಿಕೆಯ ಸೇವೆಯಲ್ಲಿ ಎಂದು ನಮೂದಿಸಿಕೊಂಡು ಅಥವಾ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಇದರಿಂದ ವಾಹನಗಳ ಅಪಘಾತಗಳಾದಾಗ ಬಿಬಿಎಂಪಿಯ ವಾಹನದಿಂದ ಅಪಘಾತವಾಗುತ್ತಿದೆ ಎಂದು ದಿನಪತ್ರಿಕೆಗಳಲ್ಲಿ ಅಥವಾ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದರಿಂದ ಪಾಲಿಕೆಯ ಮೇಲೆ ತಪ್ಪು ಪರಿಕಲ್ಪನೆ ಮೂಡುತ್ತಿರುತ್ತದೆ.

ಹಾಗಾಗಿ,ಮುಂದಿನ ದಿನಗಳಲ್ಲಿ ವಾಹನಗಳ‌ ಮೇಲೆ ಅನಧಿಕೃತವಾಗಿ ಪಾಲಿಕೆಯ ಹೆಸರನ್ನು ನಮೂದಿಸುವುದು ಅಥವಾ ನಾಮಫಲಕಗಳನ್ನು ಹಾಕುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ‌ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...