Tuesday, March 24, 2026
Tuesday, March 24, 2026

ವೆಸ್ಟ್ ಇಂಡೀಸ್ ವಿರುದ್ಧ ಕ್ರಿಕೆಟ್ ಏಕದಿನ ಸರಣಿಭಾರತದ ಮಡಿಲಿಗೆ

Date:

ವೆಸ್ಟ್‌ಇಂಡೀಸ್‌ ತಂಡ ನೀಡಿದ ಬೃಹತ್‌ ಗುರಿಯನ್ನ ಬೆನ್ನತ್ತಿ ಎರಡನೇ ಪಂದ್ಯದಲ್ಲಿ ಗೆಲ್ಲುವ ಮುಖಾಂತರ ಭಾರತ ತಂಡ ಸರಣಿಯನ್ನ ಕೈವಶ ಮಾಡಿಕೊಂಡಿದೆ.

ಇದರ ಜೊತೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆಯನ್ನ ಸಾಧಿಸಿದೆ.

ಆತಿಥೇಯರ ವಿರುದ್ಧ ಮೊದಲನೇ ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಕೆರಿಬಿಯನ್ನರು 311 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದ್ದರು. ಆದರೆ, ಮೊದಲ ಪಂದ್ಯದಲ್ಲಿ 97 ರನ್‌ ಗಳಿಸಿದ್ದ ನಾಯಕ ಶಿಖರ್‌ ಧವನ್‌ ಇಂದಿನ ಪಂದ್ಯದಲ್ಲಿ ಕೇವಲ 13 ರನ್‌ ಗಳಿಸಿ ಔಟಾಗಿದ್ದರು. ಬಳಿಕ ಬಂದ ಶ್ರೇಯಸ್‌ ಅಯ್ಯರ್‌(63), ಶುಭಮನ್‌ ಗಿಲ್‌(43) ಸಂಜು ಸ್ಯಾಮನ್ಸನ್‌(54), ದೀಪಕ್‌ ಹೂಡಾ(33) ಮತ್ತು ಅಕ್ಸರ್‌ ಪಟೇಲ್‌(64) ಅವರ ಜವಾಬ್ದಾರಿ ಆಟದಿಂದ ಟೀಂ ಇಂಡಿಯಾ ಗೆಲುವನ್ನು ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ್ದ ವಿಂಡೀಸ್‌ ತಂಡದ ಪರ ಶಾಯ್ ಹೋಪ್‌ ಆಕರ್ಷಕ 115 ರನ್‌ ಗಳಿಸಿ ಶತಕದ ಸಂಭ್ರಮಪಟ್ಟಿದ್ದರು. ಬಳಿಕ ಬಂದ ಶಮರ್ ಬ್ರೂಕ್ಸ್(35), ಕೆ ಮೇಯರ್ಸ್(39) ಹಾಗೂ ಪೂರನ್‌ 75 ರನ್‌ ಸೇರಿದಂತೆ ಉಳಿದ ಆಟಗಾರರು ತಂಡಕ್ಕೆ ನೀಡಿದ ರನ್‌ ಕೊಡುಗೆಯಿಂದ ವಿಂಡೀಸ್‌ ತಂಡ ಅಂತಿಮವಾಗಿ 6 ವಿಕೆಟ್‌ ಕಳೆದುಕೊಂಡು 311 ರನ್‌ಗಳ ಗುರಿಯನ್ನ ಭಾರತಕ್ಕೆ ನೀಡಿತ್ತು.

ಭಾರತದ ಪರ ಶಾರ್ದೂಲ್ ಠಾಕೂರ್‌ 3, ದೀಪಕ್‌ ಹೂಡಾ, ಅಕ್ಸರ್‌ ಪಟೇಲ್‌ ಹಾಗೂ ಯಜುವೇಂದ್ರ ಚಹಾಲ್‌ ತಲಾ ಒಂದು ವಿಕೆಟ್‌ ಕಬಳಿಸಿದ್ದರು. ಇನ್ನು ವಿಂಡೀಸ್‌ ತಂಡದ ಪರ ಅಲ್ಜಾರಿ ಜೋಸೆಫ್(2), ಕೈಲ್ ಮೇಯರ್ಸ್(2) ರೊಮಾರಿಯೋ ಶೆಫರ್ಡ್ ಹಾಗೂ ಕೈಲ್ ಮೇಯರ್ಸ್ ತಲಾ 1 ವಿಕೆಟ್‌ ಪಡೆದು ಸಂಭ್ರಮಿಸಿದರು. 3 ಹಾಗೂ ಅಂತಿಮ ಏಕದಿನ ಪಂದ್ಯ ಜು.27 ರಂದು ಟ್ರಿನಿಡ್ಯಾಡ್‌ನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...