Sunday, August 23, 2026
Sunday, August 23, 2026

ವೆಸ್ಟ್ ಇಂಡೀಸ್ ವಿರುದ್ಧ ಕ್ರಿಕೆಟ್ ಏಕದಿನ ಸರಣಿಭಾರತದ ಮಡಿಲಿಗೆ

Date:

ವೆಸ್ಟ್‌ಇಂಡೀಸ್‌ ತಂಡ ನೀಡಿದ ಬೃಹತ್‌ ಗುರಿಯನ್ನ ಬೆನ್ನತ್ತಿ ಎರಡನೇ ಪಂದ್ಯದಲ್ಲಿ ಗೆಲ್ಲುವ ಮುಖಾಂತರ ಭಾರತ ತಂಡ ಸರಣಿಯನ್ನ ಕೈವಶ ಮಾಡಿಕೊಂಡಿದೆ.

ಇದರ ಜೊತೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆಯನ್ನ ಸಾಧಿಸಿದೆ.

ಆತಿಥೇಯರ ವಿರುದ್ಧ ಮೊದಲನೇ ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಕೆರಿಬಿಯನ್ನರು 311 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದ್ದರು. ಆದರೆ, ಮೊದಲ ಪಂದ್ಯದಲ್ಲಿ 97 ರನ್‌ ಗಳಿಸಿದ್ದ ನಾಯಕ ಶಿಖರ್‌ ಧವನ್‌ ಇಂದಿನ ಪಂದ್ಯದಲ್ಲಿ ಕೇವಲ 13 ರನ್‌ ಗಳಿಸಿ ಔಟಾಗಿದ್ದರು. ಬಳಿಕ ಬಂದ ಶ್ರೇಯಸ್‌ ಅಯ್ಯರ್‌(63), ಶುಭಮನ್‌ ಗಿಲ್‌(43) ಸಂಜು ಸ್ಯಾಮನ್ಸನ್‌(54), ದೀಪಕ್‌ ಹೂಡಾ(33) ಮತ್ತು ಅಕ್ಸರ್‌ ಪಟೇಲ್‌(64) ಅವರ ಜವಾಬ್ದಾರಿ ಆಟದಿಂದ ಟೀಂ ಇಂಡಿಯಾ ಗೆಲುವನ್ನು ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ್ದ ವಿಂಡೀಸ್‌ ತಂಡದ ಪರ ಶಾಯ್ ಹೋಪ್‌ ಆಕರ್ಷಕ 115 ರನ್‌ ಗಳಿಸಿ ಶತಕದ ಸಂಭ್ರಮಪಟ್ಟಿದ್ದರು. ಬಳಿಕ ಬಂದ ಶಮರ್ ಬ್ರೂಕ್ಸ್(35), ಕೆ ಮೇಯರ್ಸ್(39) ಹಾಗೂ ಪೂರನ್‌ 75 ರನ್‌ ಸೇರಿದಂತೆ ಉಳಿದ ಆಟಗಾರರು ತಂಡಕ್ಕೆ ನೀಡಿದ ರನ್‌ ಕೊಡುಗೆಯಿಂದ ವಿಂಡೀಸ್‌ ತಂಡ ಅಂತಿಮವಾಗಿ 6 ವಿಕೆಟ್‌ ಕಳೆದುಕೊಂಡು 311 ರನ್‌ಗಳ ಗುರಿಯನ್ನ ಭಾರತಕ್ಕೆ ನೀಡಿತ್ತು.

ಭಾರತದ ಪರ ಶಾರ್ದೂಲ್ ಠಾಕೂರ್‌ 3, ದೀಪಕ್‌ ಹೂಡಾ, ಅಕ್ಸರ್‌ ಪಟೇಲ್‌ ಹಾಗೂ ಯಜುವೇಂದ್ರ ಚಹಾಲ್‌ ತಲಾ ಒಂದು ವಿಕೆಟ್‌ ಕಬಳಿಸಿದ್ದರು. ಇನ್ನು ವಿಂಡೀಸ್‌ ತಂಡದ ಪರ ಅಲ್ಜಾರಿ ಜೋಸೆಫ್(2), ಕೈಲ್ ಮೇಯರ್ಸ್(2) ರೊಮಾರಿಯೋ ಶೆಫರ್ಡ್ ಹಾಗೂ ಕೈಲ್ ಮೇಯರ್ಸ್ ತಲಾ 1 ವಿಕೆಟ್‌ ಪಡೆದು ಸಂಭ್ರಮಿಸಿದರು. 3 ಹಾಗೂ ಅಂತಿಮ ಏಕದಿನ ಪಂದ್ಯ ಜು.27 ರಂದು ಟ್ರಿನಿಡ್ಯಾಡ್‌ನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...