Tuesday, August 25, 2026
Tuesday, August 25, 2026

ರಾಜ್ಯ ಸರ್ಕಾರಿ ನೌಕರರಿಗೆ ಸಮಯಪಾಲನೆ ಆದೇಶ

Date:

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.

ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು. ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡೆ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...