Wednesday, March 25, 2026
Wednesday, March 25, 2026

ಬೊಮ್ಮಾಯಿ ಸರ್ಕಾರದ ಜನೋತ್ಸವವು ಭ್ರಷ್ಟೋತ್ಸವ- ಸಿದ್ಧರಾಮಯ್ಯ

Date:

ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 1 ವರ್ಷ ಪೂರೈಸಿದ ಹಿನ್ನೆಲೆ ಜುಲೈ 28ರಂದು ಚಿಕ್ಕಬಳ್ಳಾಪುರದಲ್ಲಿ ವರ್ಷಾಚರಣೆ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ.

ಭ್ರಷ್ಟ ಹಣದಿಂದಲೇ ಅಧಿಕಾರಕ್ಕೆ ಬಂದು, ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ಈ ಸರ್ಕಾರದ ವರ್ಷದ ಸಂಭ್ರಮವನ್ನು ಭ್ರಷ್ಟೋತ್ಸವ ಎಂದು ಕರೆದರೆ ಅರ್ಥಪೂರ್ಣವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಶೇ. 40 ರಷ್ಟು ಕಮಿಷನ್, ಗುತ್ತಿಗೆದಾರ ಆತ್ಮಹತ್ಯೆ, ಪಿಎಸ್‌ಐ ನೇಮಕಾತಿ ಹಾಗೂ ಉಪನ್ಯಾಸಕರ ನೇಮಕಾತಿ ಹಗರಣಗಳು ಬಿಜೆಪಿ ಸರ್ಕಾರದ ವರ್ಷದ ಸಾಧನೆಯಾಗಿದೆ.

ಇಷ್ಟೆಲ್ಲಾ ಆರೋಪಗಳಿದ್ದರೂ ಒಮ್ಮೆಯೂ ತಮ್ಮನ್ನು ತಾವು ನ್ಯಾಯಯುತ ತನಿಖೆಗೆ ಒಳಪಡಿಸಿಕೊಳ್ಳದೆ ಸರ್ಕಾರ ಭಂಡತನ ಮೆರೆದಿದೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು, ಜುಲೈ 26, ಬಸವರಾಜ್ ಬೊಮ್ಮಾಯಿಯವರು ಆರ್ ಎಸ್ ಎಸ್ ನಿಂದ ನೇಮಕಗೊಂಡದ್ದು ಜುಲೈ 28ರಂದು. ದಿನಾಂಕ ಬದಲಿಸಿ ಸಂಭ್ರಮಾಚರಣೆ ಮಾಡಿದ ಮಾತ್ರಕ್ಕೆ ಇಬ್ಬರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಬದಲಾವಣೆ ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿ ಎಸ್ ವೈ ಅವರು ಮುಖ್ಯಮಂತ್ರಿಯಾಗಿದ್ದು ಜುಲೈ 26, ಬೊಮ್ಮಾಯಿ ಅವರು ಆರ್.ಎಸ್.ಎಸ್ ನಿಂದ ನೇಮಕಗೊಂಡದ್ದು ಜುಲೈ 28.
ದಿನಾಂಕ ಬದಲಿಸಿ ಸಂಭ್ರಮಾಚರಣೆ ಮಾಡಿದ ಮಾತ್ರಕ್ಕೆ ಇಬ್ಬರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಬದಲಾವಣೆ ಆಗುತ್ತದೆಯೇ

15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತರಲಾಗದೆ ಕೇಂದ್ರದ ಬಿಜೆಪಿ ನಾಯಕರ ಎದುರು ಮಂಡಿಯೂರಿ ಶರಣಾದ ಬಸವರಾಜ್ ಬೊಮ್ಮಾಯಿಯವರ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಎಸಗಿದ ದ್ರೋಹವನ್ನೇ ಸಂಭ್ರಮಾಚರಣೆ ಮಾಡಲು ಹೊರಟಿದೆಯೇ ಎಂದು ಟ್ವೀಟ್ ಮುಖಾಂತರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...