Wednesday, October 2, 2024
Wednesday, October 2, 2024

ಬೊಮ್ಮಾಯಿ ಸರ್ಕಾರದ ಜನೋತ್ಸವವು ಭ್ರಷ್ಟೋತ್ಸವ- ಸಿದ್ಧರಾಮಯ್ಯ

Date:

ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 1 ವರ್ಷ ಪೂರೈಸಿದ ಹಿನ್ನೆಲೆ ಜುಲೈ 28ರಂದು ಚಿಕ್ಕಬಳ್ಳಾಪುರದಲ್ಲಿ ವರ್ಷಾಚರಣೆ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ.

ಭ್ರಷ್ಟ ಹಣದಿಂದಲೇ ಅಧಿಕಾರಕ್ಕೆ ಬಂದು, ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ಈ ಸರ್ಕಾರದ ವರ್ಷದ ಸಂಭ್ರಮವನ್ನು ಭ್ರಷ್ಟೋತ್ಸವ ಎಂದು ಕರೆದರೆ ಅರ್ಥಪೂರ್ಣವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಶೇ. 40 ರಷ್ಟು ಕಮಿಷನ್, ಗುತ್ತಿಗೆದಾರ ಆತ್ಮಹತ್ಯೆ, ಪಿಎಸ್‌ಐ ನೇಮಕಾತಿ ಹಾಗೂ ಉಪನ್ಯಾಸಕರ ನೇಮಕಾತಿ ಹಗರಣಗಳು ಬಿಜೆಪಿ ಸರ್ಕಾರದ ವರ್ಷದ ಸಾಧನೆಯಾಗಿದೆ.

ಇಷ್ಟೆಲ್ಲಾ ಆರೋಪಗಳಿದ್ದರೂ ಒಮ್ಮೆಯೂ ತಮ್ಮನ್ನು ತಾವು ನ್ಯಾಯಯುತ ತನಿಖೆಗೆ ಒಳಪಡಿಸಿಕೊಳ್ಳದೆ ಸರ್ಕಾರ ಭಂಡತನ ಮೆರೆದಿದೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು, ಜುಲೈ 26, ಬಸವರಾಜ್ ಬೊಮ್ಮಾಯಿಯವರು ಆರ್ ಎಸ್ ಎಸ್ ನಿಂದ ನೇಮಕಗೊಂಡದ್ದು ಜುಲೈ 28ರಂದು. ದಿನಾಂಕ ಬದಲಿಸಿ ಸಂಭ್ರಮಾಚರಣೆ ಮಾಡಿದ ಮಾತ್ರಕ್ಕೆ ಇಬ್ಬರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಬದಲಾವಣೆ ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿ ಎಸ್ ವೈ ಅವರು ಮುಖ್ಯಮಂತ್ರಿಯಾಗಿದ್ದು ಜುಲೈ 26, ಬೊಮ್ಮಾಯಿ ಅವರು ಆರ್.ಎಸ್.ಎಸ್ ನಿಂದ ನೇಮಕಗೊಂಡದ್ದು ಜುಲೈ 28.
ದಿನಾಂಕ ಬದಲಿಸಿ ಸಂಭ್ರಮಾಚರಣೆ ಮಾಡಿದ ಮಾತ್ರಕ್ಕೆ ಇಬ್ಬರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಬದಲಾವಣೆ ಆಗುತ್ತದೆಯೇ

15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತರಲಾಗದೆ ಕೇಂದ್ರದ ಬಿಜೆಪಿ ನಾಯಕರ ಎದುರು ಮಂಡಿಯೂರಿ ಶರಣಾದ ಬಸವರಾಜ್ ಬೊಮ್ಮಾಯಿಯವರ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಎಸಗಿದ ದ್ರೋಹವನ್ನೇ ಸಂಭ್ರಮಾಚರಣೆ ಮಾಡಲು ಹೊರಟಿದೆಯೇ ಎಂದು ಟ್ವೀಟ್ ಮುಖಾಂತರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...