Sunday, June 21, 2026
Sunday, June 21, 2026

ಪ.ಬಂಗಾಳ ಸಚಿವರ ಆಪ್ತ ಸಹಾಯಕಿ ಮನೆಯಲ್ಲಿ ₹ 29 ಕೋಟಿ ಪತ್ತೆ

Date:

ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಕೋಲ್ಕತ್ತಾದ ಎರಡನೇ ಫ್ಲಾಟ್‌ನಿಂದ ಸುಮಾರು 29 ಕೋಟಿ ರೂ. ನಗದು ಮತ್ತು ಐದು ಕೆಜಿ ಚಿನ್ನಾಭರಣ ಪತ್ತೆಯಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾದ ಬೆಲ್‌ಘಾರಿಯಾ ಪ್ರದೇಶದಲ್ಲಿರುವ ಅರ್ಪಿತಾ ಮುಖರ್ಜಿ ಅವರ ಮನೆಯಿಂದ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಮುಂಜಾನೆ 10 ಟ್ರಂಕ್‌ಗಳೊಂದಿಗೆ ತೆರಳಿದ್ದಾರೆ. ಮುಖರ್ಜಿ ಅವರ ಎರಡನೇ ಫ್ಲಾಟ್‌ನಿಂದ ವಶಪಡಿಸಿಕೊಂಡ ನಿಖರವಾದ ಹಣವನ್ನು ತಿಳಿಯಲು ಇಡಿ ಅಧಿಕಾರಿಗಳು ಮೂರು ನೋಟು ಎಣಿಕೆ ಯಂತ್ರಗಳನ್ನು ಬಳಸಿದ್ದಾರೆ ಎಂದು ಮೂಲಗಳು ತಿಳಿಸಿವೆ

ನಗರದ ಉತ್ತರದ ಅಂಚಿನಲ್ಲಿರುವ ಬೆಲ್ಘಾರಿಯಾದಲ್ಲಿನ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಒಂದು ಕೊಠಡಿಯಲ್ಲಿ ಈ ನೋಟುಗಳ ರಾಶಿ ಪತ್ತೆಯಾಗಿದೆ.
ಇಡಿ ಅಧಿಕಾರಿಗಳು ತಮ್ಮ ತನಿಖೆಯ ಭಾಗವಾಗಿ ಮನೆ ಮೇಲೆ ದಾಳಿ ನಡೆಸಿದ್ದರು. ವಿಚಾರಣೆ ವೇಳೆ ಅರ್ಪಿತಾ ಮುಖರ್ಜಿ ತನ್ನ ಎಲ್ಲಾ ಆಸ್ತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಶನಿವಾರ ಬಂಧಿಸಲಾಯಿತು. ಕಳೆದ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ 20 ಕೋಟಿ ರೂ. ನಗದು ಹಣ ಪತ್ತೆಯಾಗಿತ್ತು. ಈಗಾಗಲೇ ಅವರನ್ನ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಾರ್ಥ ಚಟರ್ಜಿ ಅವರು ಆಗಸ್ಟ್ 3 ರವರೆಗೆ ತನಿಖಾ ಸಂಸ್ಥೆಯ ಕಸ್ಟಡಿಯಲ್ಲಿರಲಿದ್ದಾರೆ.

ಈ ಹಣ ರಾಜ್ಯದ ಬೃಹತ್ ಶಿಕ್ಷಕರ ನೇಮಕಾತಿ ಹಗರಣದಿಂದ ಕಿಕ್‌ಬ್ಯಾಕ್ ಆಗಿದೆ ಎಂದು ಅರ್ಪಿತಾ ಮುಖರ್ಜಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ. ನಗದು ಇಟ್ಟಿದ್ದ ಕೊಠಡಿಗೆ ಪಾರ್ಥ ಚಟರ್ಜಿ ಮತ್ತು ಅವರ ವ್ಯಕ್ತಿಗಳಿಗೆ ಮಾತ್ರ ಪ್ರವೇಶವಿದೆ ಎಂದು ಅವರು ಹೇಳಿದ ಅವರು, 10 ದಿನಕ್ಕೊಮ್ಮೆ ಇಲ್ಲಿಗೆ ಬರುತ್ತಿದ್ದರು. ಪಾರ್ಥ ನನ್ನ ಮನೆ ಮತ್ತು ಇನ್ನೊಬ್ಬ ಮಹಿಳೆಯ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದಾನೆ. ಆ ಮಹಿಳೆ ಕೂಡ ಆತನ ಆಪ್ತ ಸ್ನೇಹಿತೆ ಎಂದು ಅರ್ಪಿತಾ ಮುಖರ್ಜಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...