Tuesday, April 28, 2026
Tuesday, April 28, 2026

ಯಾವ ತನಿಖೆಯೇ ಮಾಡಲಿ ಪೋಲಿಸರು ವಿಫಲರಾಗಿದ್ದಾರೆ- ಡಿ ಕೆ ಶಿವಕುಮಾರ್

Date:

ಒಬ್ಬ ಹೋಮ್‌ ಮಿನಿಸ್ಟರ್, ಪಕ್ಷ ಎಂದು ತೆಗೆದುಕೊಂಡರೇ ರಾಜ್ಯ ಉಳಿಯಲು ಸಾಧ್ಯವಿಲ್ಲ. ಕಳೆದ 15 ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿದೆ. ಯಾರದ್ದೊ‌ ಕಡೆ ಬೆರಳು ತೋರಿಸಿ ಸುಮ್ಮನೆ ಅವಲಕ್ಷಣ ಎನ್ನಿಸಿಕೊಳ್ಳಬೇಡಿ. ಯಾರು ಇದರಲ್ಲಿ ಭಾಗಿಯಾಗಿದ್ದಾರೆಂದು ಡಿಜಿಪಿ ಇಲ್ಲವೇ ಎಸ್‌ಪಿ ಹೇಳಬೇಕು.

ಇತಂಹ ಕೊಲೆಗಳು ರಾಜಕೀಯವಾಗಿ ಆಯ್ತಾ, ಖಾಸಗೀಯಾಗಿ ಆಯಿತಾ, ಬೇರೆ ಉದ್ದೇಶದಿಂದ ಆಯ್ತಾ ಅಂತಾ ಪೊಲೀಸ್ ಅಧಿಕಾರಿಗಳು ಪ್ರಾಮಾಣೀಕರಿಸಬೇಕು. ತನಿಖೆ‌ ಮಾಡಿ ಯಾರೇ ಆದರೂ, ಕಾನೂನು ಕ್ರಮ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು, ಸರ್ಕಾರ ವಿಫಲವಾಗಿದೆ. ಸುಮ್ಮನೆ ಬಾಳೆಹಣ್ಣು ತಿಂದು ಸಿಪ್ಪೆನಾ ಬೇರೆ ಬಾಯಿಗೆ ಒರಸುವ ಪ್ರಯತ್ನ ಮಾಡಬಾರದು. ತನಿಖೆ ನಡೆಯಲಿ, ಅವರನ್ನು ಬಂಧಿಸಬೇಕು. ಸತ್ಯಾಂಶವನ್ನು ಹೊರಗೆ ಬರಲಿ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆಯನ್ನು ರಾಜಕೀಯಕ್ಕೆ ಮಾಡಿದ್ದಾರೋ, ಬೇರೆ ವೈಯಕ್ತಿಕ ವಿಚಾರಕ್ಕೆ ಮಾಡಿದ್ದಾರೋ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸತ್ಯಾಂಶ ಎಲ್ಲವೋ ಹೊರಗೆ ಬರಬೇಕು. ಜನರಿಗೂ ಗೊತ್ತಾಗಬೇಕು. ಯಾವ ತನಿಖೆ ಬೇಕಾದರೂ ಮಾಡಲಿ. ಒಟ್ಟಾರೆ ಪೊಲೀಸ್ ನವರು ವಿಫಲರಾಗಿದ್ದಾರೆ. ಕಾನೂನು ವ್ಯವಸ್ಥೆಯಲ್ಲಿ ಫೇಲ್ ಆಗಿದೆ. ಗೃಹ ಸಚಿವರು ಹೇಳಿದ್ದನ್ನು ಲೋಕಲ್ ಎಸ್‌ಪಿ ಹೇಳಲಿ. ಬಿಜೆಪಿಯವರಿಗೆ ರಾಜಕೀಯನೇ ಮುಖ್ಯವಾಗಿದೆ ಎಂಬುದಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಾರಿ ಶಕ್ತಿ ವಂದನ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಿ ಆಕ್ರೋಶ

S.N. Channabasappa ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ 'ನಾರಿ ಶಕ್ತಿ...

Madhu Bangarappa ಗಾಳಿಮಳೆಯಿಂದಾದ ಹಾನಿಗೆ ಸೂಕ್ತ ಕ್ರಮಕ್ಕೆ ಸೂಚನೆ : ಎಸ್ಸೆಸ್ಎಲ್ಸಿ & ಪಿಯು ಅತ್ಯುತ್ತಮ ಫಲಿತಾಂಶ- ಮಧುಬಂಗಾರಪ್ಪ

Madhu Bangarappa ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ : ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ...

B.Y. Raghavendra ಕಳೆದ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ:ವಿವಿಧೆಡೆ ಹಾನಿ, ತಕ್ಷಣ ಕ್ರಮಕೈಗೊಳ್ಳಿ-ಸಂಸದ ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ...