Monday, September 21, 2026
Monday, September 21, 2026

ಮುಖ್ಯಮಂತ್ರಿ ಜಿಲ್ಲಾ ಪ್ರವಾಸದಲ್ಲಿದ್ದಾಗಲೇ ಕೊಲೆ ಪ್ರಕರಣ- ಸಿದ್ಧರಾಮಯ್ಯ ಟೀಕೆ

Date:

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಬಿಜೆಪಿ ಸರ್ಕಾರ ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಟೀಕಿಸಿದ್ದಾರೆ.
ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಟೀಕಿಸಿದ್ದಾರೆ.

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ದೂರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...