Thursday, February 5, 2026
Thursday, February 5, 2026

ಅಕ್ಷರ ಕಲಿಕೆ ಚಿತ್ರರೂಪದಲ್ಲಿದ್ದರೆ ಮಕ್ಕಳಿಗೆ ಸುಲಭ- ಮಂಜುನಾಥ್

Date:

ಅಕ್ಷರಗಳು ಭಾಷೆಯ ದೃಶ್ಯ ರೂಪ ಗಳಾಗಿದೆ. ಅಕ್ಷರಗಳ ಬರವಣಿಗೆಯನ್ನು ಪುಟ್ಟ ಮಕ್ಕಳಿಗೆ ಹೇಳಿಕೊಡುವಾಗ ಚಿತ್ರ ರೂಪದಲ್ಲಿ ಹೇಳಿ ಕೊಟ್ಟಲ್ಲಿ ಮಕ್ಕಳಿಗೆ ಕಷ್ಟವಾಗದೇ ಇಷ್ಟವಾಗುತ್ತದೆ ಎಂದು ಹಿರಿಯ ಪತ್ರಕರ್ತ ಎಚ್.ಬಿ.ಮಂಜುನಾಥ ಅವರು ಅಭಿಪ್ರಾಯಪಟ್ಟಿದ್ದಾರೆ.

ದಾವಣಗೆರೆ ಸಮೀಪದ ಅವರಗೆರೆಯ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತ, ಪುಟ್ಟ ಮಕ್ಕಳಿಗೆ ಯಾವುದೇ ಭಾಷೆಯ ವರ್ಣಮಾಲೆ ಬರವಣಿಗೆ ಕಲಿಸಿಕೊಡುವಾಗ ಅಕ್ಷರಗಳನ್ನು ಆ ಅಕ್ಷರದ ರೂಪಕ್ಕೆ ಹೋಲಿಕೆಯಾಗುವ ಹಣ್ಣು ತರಕಾರಿ ಪ್ರಾಣಿ ಪಕ್ಷಿ ಅಥವಾ ಯಾವುದೇ ವಸ್ತುಗಳ ರೂಪಕ್ಕೆ ಹೋಲಿಸಿ ಬರೆದು ತೋರಿಸಿದಾಗ ಇಷ್ಟವಾಗುತ್ತದೆ. ಇದರಿಂದ ಅಕ್ಷರ ಅಭ್ಯಾಸದಲ್ಲಿ ಮಕ್ಕಳಿಗೆ ಆಸಕ್ತಿ ಹೆಚ್ಚುತ್ತದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮಿಗಳವರು ಅಕ್ಷರದಿಂದ ವಿದ್ಯೆ, ವಿದ್ಯೆಯಿಂದ ಜ್ಞಾನ,ಜ್ಞಾನದಿಂದ ಬದುಕಿನ ಸಾರ್ಥಕತೆ, ಆದ್ದರಿಂದ, ಅಕ್ಷರಾಭ್ಯಾಸವು ಪ್ರಮುಖ ಘಟ್ಟವಾಗಿದೆ ಎಂದು ಹೇಳಿದ್ದಾರೆ.

ವಿಜ್ಞಾನ ಪರಿಷತ್ತಿನ ಕಾರ್ಯದರ್ಶಿ ಎಂ. ಗುರುಸಿದ್ಧ ಸ್ವಾಮಿ ಮುಖ್ಯ ಅತಿಥಿಗಳಾಗಿ ಮಾತುಗಳನ್ನಾಡಿದರು.

ಸಂಸ್ಥೆಯ ಶಿವಮೂರ್ತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಛಾಯಾದೇವಿ, ಸಂಸ್ಥೆಯ ನಿರ್ದೇಶಕಿ ಸುಗಲಾ ದೇವಿ, ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ ಉಪಸ್ಥಿತರಿದ್ದು. ಗುಣಶೀಲ ಪ್ರಾರ್ಥನೆ ಹಾಡಿದರೆ ಸಹಶಿಕ್ಷಕಿ ನೇತ್ರಾವತಿ ಸ್ವಾಗತ ಕೋರಿದರು. ಅನ್ನಪೂರ್ಣ ವಂದನೆ ಸಮರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...