Tuesday, May 5, 2026
Tuesday, May 5, 2026

ಸೆಮಿಫೈನಲ್ ನತ್ತ ವೆಸ್ಟ್ ಇಂಡೀಸ್

Date:

ಟಿ-20 ವಿಶ್ವ ಕಪ್ ಟೂರ್ನಿಯ ಸೂಪರ್ -12 ರ A- ಗುಂಪಿನ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾ ದೇಶದ ನಡುವೆ ಪಂದ್ಯ ನಡೆಯಿತು. ವೆಸ್ಟ್ ಇಂಡೀಸ್ ತಂಡ ಬಾಂಗ್ಲಾ ದೇಶದ ವಿರುದ್ಧ ಭರ್ಜರಿ ಜಯ ಗಳಿಸಿತು.
ಶಾರ್ಜಾ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು.
ಕ್ರಿಸ್ ಗೇಲ್, ಎವಿನ್ ಲೂಯಿಸ್, ಶಿಮ್ರಾನ್ ಹೆಟ್ಮಿಯರ್ ಮತ್ತು ಆಂಡ್ರೆ ರಸೆಲ್ ಮುಂತಾದ ದಿಗ್ಗಜರ ಬೌಲಿಂಗ್ ವೈಫಲ್ಯದಿಂದ ವೆಸ್ಟ್ ಇಂಡೀಸ್ ತಂಡದ ರನ್ ರೇಟ್ ಕುಸಿತ ಕಂಡಿತ್ತು. ಈ ಸಂದರ್ಭದಲ್ಲಿ ಕೈ ಹಿಡಿದವರು ನಿಕೋಲಸ್ ಪೂರನ್ 22 ಎಸೆತ ಗಳಲ್ಲಿ 40 ರನ್ ಗಳಿಸಿದ ಪೂರನ್ ಅವರ ರೋಚಕ ಬ್ಯಾಟಿಂಗ್ ನಿಂದ ಸವಾಲಿನ ಮೊತ್ತ ಕಲೆ ಹಾಕಿದರು.
ಕ್ರಿಸ್ ಗೇಲ್ ಮತ್ತು ಎವಿನ್ ಲೂಯಿಸ್ ಅವರನ್ನ ಬಾಂಗ್ಲಾದೇಶದ ಬೌಲರ್ ಎರಡಂಕಿ ಮೊತ್ತ ಗಳಿಸುವಷ್ಟರ ಮೊದಲೇ ವಿಕೆಟ್ ತೆಗೆದು ವಾಪಸ್ ಕಳುಹಿಸಿದರು. ನಾಯಕ ಮಹಮ್ಮದ್ದುಲ್ಲ ಅವರ ನಿರ್ಧಾರ ಸಮರ್ಥಿಸಿಕೊಂಡು 3 ನೇ ಕ್ರಮಾಂಕದ ಬ್ಯಾಟಿಂಗ್ ಗೆ ಇಳಿದ ಕಾಸ್ಮಸ್ ಚೀಸ್ ಪಾದಾರ್ಪಣೆ ಪಂದ್ಯದಲ್ಲಿ ಬಹಳ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿ ತಂಡದ ಗೆಲುವಿಗೆ ಆಸರೆಯಾದರು.
143 ರನ್ ಗಳ ಗೆಲುವಿನ ಗುರಿಯನ್ನಿಟ್ಟುಕೊಂಡು ಬೆನ್ನತ್ತಿ ಆಡಿದ ಬಾಂಗ್ಲಾದೇಶ ಒಂದು ಹಂತದಲ್ಲಿ ಜಯ ಸಾಧಿಸುತ್ತ ಹೆಜ್ಜೆ ಹಾಕಿತ್ತು. ಆದರೆ, ನಂತರ ವೆಸ್ಟ್ ಇಂಡೀಸ್ ತಂಡದ ಬೌಲರ್ ಗಳ ಪ್ರಾಬಲ್ಯದಿಂದಾಗಿ ಕೊನೆಯ ಓವರ್ ನಲ್ಲಿ ಬಾಂಗ್ಲಾದೇಶದ ಗೆಲುವಿಗೆ 13 ರನ್ ಬೇಕಾಗಿತ್ತು. ಆದರೆ ವೆಸ್ಟ್ ಇಂಡೀಸ್ ತಂಡದ ಪ್ರಭಾವಶಾಲಿ ಬೌಲರ್ ಆದ ಆಂಡ್ರೆ ರಸಲ್, ಅವರ ರೋಮಾಂಚಕ ಬೌಲಿಂಗ್ ನಿಂದ ನಿಯಂತ್ರಿಸಿದರು.
ವೆಸ್ಟ್ ಇಂಡೀಸ್ ತಂಡದ ಎಲ್ಲಾ ಆಟಗಾರರಿಂದ ಉತ್ತಮ ಪ್ರದರ್ಶನದ ಪ್ರತಿಫಲವಾಗಿ ಬಾಂಗ್ಲಾದೇಶದ ವಿರುದ್ಧ 3 ರನ್ ಗಳಿಂದ ಜಯ ಸಾಧಿಸಿ ಸತತ ಎರಡು ಸೋಲಿನ ನಂತರ ಚೇತರಿಸಿಕೊಂಡು ಹಾಲಿ ಚಾಂಪಿಯನ್ ಶಿಪ್ ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...