Friday, December 12, 2025
Friday, December 12, 2025

ಗಾಣಿಗ ಜಾತಿ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟನೆ-ತೀರ್ಪು

Date:

ಉತ್ತರ ಕರ್ನಾಟಕದಲ್ಲಿ ಕಂಡುಬರುವ ಗಾಣಿಗೇರ್ ಎಂಬುದು ಗಾಣಿಗ ಪದದ ರೂಪಾಂತರವಾಗಿದೆ. ಹಿಂದೂ ಗಾಣಿಗ ಮತ್ತು ಲಿಂಗಾಯತ ಗಾಣಿಗ 2 ವಿಭಿನ್ನ ಜಾತಿಗಳಲ್ಲ. ಎರಡೂ ಒಂದೇ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಒಬಿಸಿ ಮೀಸಲಾತಿಗಾಗಿ ಸಂಗಪ್ಪ ಹಸನಪ್ಪ ಮಾಳೆಣ್ಣನವರ್ ಎಂಬುವರಿಗೆ ನೀಡಿದ್ದ ಗಾಣಿಗ ಜಾತಿ ಪ್ರಮಾಣ ಪತ್ರದ ವಿರುದ್ಧ ಏಕ ಪೀಠದ ತೀರ್ಪನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದ ವಿರುದ್ಧ ಎಂವಿ ಚಂದ್ರಕಾಂತ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ ಕೆ ಮಹೇಶ್ವರಿ ಅವರ ಪೀಠ ವಜಾಗೊಳಿಸಿದೆ.

ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಆಯ್ಕೆಯಾದ 1999ರ ಬ್ಯಾಚ್ ಅಭ್ಯರ್ಥಿಗಳಲ್ಲಿ ಸಂಗಪ್ಪ ಕೂಡ ಒಬ್ಬರು. ಉಪ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ಚಂದ್ರಕಾಂತ್ ಹಾಗೂ ಸಹಾಯಕ ಆಯುಕ್ತ ಹುದ್ದೆಗೆ ಸಂಗಪ್ಪ ಆಯ್ಕೆಯಾಗಿದ್ದಾರೆ. 2005ರಲ್ಲಿ ಸಂಗಪ್ಪ ಅವರ ತಂದೆ ಲಿಂಗಾಯತ ಜಾತಿಗೆ ಸೇರಿದವರು ಎಂದು ತನಗೆ ಗೊತ್ತಾಯಿತು. ಆದರೆ, ಸಂಗಪ್ಪ ಅವರು ಗಾಣಿಗ ಜಾತಿಗೆ ಸೇರಿದವರು ಎಂದು ಹೇಳಿಕೊಂಡು ಮೀಸಲಾತಿಯ ಲಾಭವನ್ನು ಪಡೆದಿದ್ದರು ಎಂದು ಚಂದ್ರಕಾಂತ್ ವಾದಿಸಿದರು.

ಈ ವಿಷಯ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠವು, ಸಂಗಪ್ಪ ಅವರ ತಂದೆ ಹಿಂದೂ ಲಿಂಗಾಯತ ಜಾತಿಗೆ ಸೇರಿದವರು ಎಂದು ಶಾಲೆಯ ದಾಖಲೆಗಳು ಬಹಿರಂಗಪಡಿಸುತ್ತವೆ. ಆದರೆ, ಅವರ ಮಗ ಗಾಣಿಗ ಸಮುದಾಯ ಎಂದು ಹೇಳಿಕೊಂಡಿರುವುದು ಸರಿಯಲ್ಲ ಎಂದಿತ್ತು. ಆದರೆ, ವಿಭಾಗೀಯ ಪೀಠವು ಏಕ ಪೀಠದ ಆದೇಶವನ್ನು ತಳ್ಳಿಹಾಕಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...